ನಗರಸಭೆಯಲ್ಲಿ ಪೌರಾಯುಕ್ತರು ಸೇರಿದಂತೆ ಇತರೆ ಅಧಿಕಾರಿಗಳು, ನೌಕರರು ಅಕ್ರಮ ಖಾತೆ ಮಾಡುತ್ತಿದ್ದಾರೆ. ಕೆಲವು ನಕಲಿ ಖಾತೆಗಳು ನಡೆಯುತ್ತಿವೆ. ನಗರಸಭೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ನಗರಸಭೆ ಅಧ್ಯಕ್ಷ ಪಿ.ಪ್ರಶಾಂತ್, ಸದಸ್ಯರಾದ ಅಭಿದಾಭಾನು, ಕೆ.ಮಂಜುನಾಥ್, ವಾಸಿಲ್ ಆಲಿಖಾನ್, ಸಾರ್ವಜನಿಕರು ಜಿಲ್ಲಾಧಿಕಾರಿಗೆ ಪ್ರತ್ಯೇಕವಾಗಿ ದೂರು ಸಲ್ಲಿಸಿದ್ದರು. ಹಾಗಾಗಿ ಜಿಲ್ಲಾಧಿಕಾರಿ ಏಳು ಮಂದಿಯ ಸಮಿತಿ ರಚಿಸಿದ್ದು, ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದರು.