ಬಿಡದಿ: ಚೌಕಹಳ್ಳಿ ಗ್ರಾಮದ ಬಳಿ ಭಾನುವಾರ ಬೆಳಿಗ್ಗೆ ವೃಷಭಾವತಿ ನದಿಗೆ ಯುವಕನೊಬ್ಬ ಆಯತಪ್ಪಿ ಬಿದ್ದು ಕೊಚ್ಚಿ ಹೋಗಿದ್ದಾನೆ.
ಚೌಕಹಳ್ಳಿ ನಿವಾಸಿ ಕೌಶಿಕ್ ರೆಡ್ಡಿ (26) ನಾಪತ್ತೆಯಾಗಿದ್ದು, ಆತನಿಗಾಗಿ ಹುಡುಕಾಟ ನಡೆದಿದೆ. ಆತ ಬೆಳಿಗ್ಗೆ ವಾಕಿಂಗ್ ಮುಗಿಸಿಕೊಂಡು ಬಂದು ಸೇತುವೆ ಮೇಲೆ ಕುಳಿತುಕೊಳ್ಳುವಾಗ ಆಯತಪ್ಪಿ ವೃಷಭಾವತಿ ನದಿ ಬಿದ್ದಿದ್ದಾನೆ ಎನ್ನಲಾಗಿದೆ.
ಬೆಂಗಳೂರಿನ ಕೆಲವೆಡೆ ಶನಿವಾರ ರಾತ್ರಿ ಉತ್ತಮ ಮಳೆಯಾದ ಕಾರಣ ವೃಷಭಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಯುವಕನ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದಾರೆ.