‘ಪುರಸಭೆ ಕಂದಾಯ ಅಧಿಕಾರಿಗಳು ಮನೆ ಮನೆಗೆ ತೆರಳಿ, ಬಡಾವಣೆಯಲ್ಲಿ ಮೊಕ್ಕಾಂ ಹೂಡಿ ಜನರಿಗೆ ಆಧಾರ್ ಕಾರ್ಡ್ ನೋಂದಣಿ ಮಾಡಿಸಲು ಮುಂದಾಗಬೇಕು. ಜನರ ಸಮಸ್ಯೆ ಪರಿಹರಿಸಲು ತಾಲ್ಲೂಕು ಆಡಳಿತ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ತಹಶೀಲ್ದಾರ್ ಕಚೇರಿ ಎದುರು ಸಾರ್ವಜನಿಕರ ಬೆಂಬಲದೊಂದಿಗೆ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.