ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಕನ್ನಡ ಜಿಲ್ಲಾ ನೋಂದಣಾಧಿಕಾರಿ ಶ್ರೀಧರ್ ಫಾರ್ಮ್‌ ಹೌಸ್ ಮೇಲೆ ಎಸಿಬಿ ದಾಳಿ

Last Updated 17 ಜೂನ್ 2022, 4:39 IST
ಅಕ್ಷರ ಗಾತ್ರ

ರಾಮನಗರ: ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನೋಂದಣಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಡಿ.ಎಸ್.ಶ್ರೀಧರ್ ಅವರಿಗೆ ಸೇರಿದ ಕಚೇರಿ, ನಿವಾಸಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ‌.

ಕಾರವಾರದಲ್ಲಿನ ನಿವಾಸ, ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ನಿವಾಸ, ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಹಾರೋಹಳ್ಳಿ ಬಳಿ ಇರುವ ಫಾರ್ಮ್ ಹೌಸ್ ಸೇರಿದಂತೆ ಒಟ್ಟು ಐದು ಕಡೆ ಅಧಿಕಾರಿಗಳ ನೇತೃತ್ವದ ತಂಡವು ದಾಳಿ ಮಾಡಿದೆ.

ಶ್ರೀಧರ್ ಇದಕ್ಕೂ ಮುನ್ನ ರಾಮನಗರ ಜಿಲ್ಲೆಯಲ್ಲಿ ಡಿ.ಆರ್. ಆಗಿ ಕಾರ್ಯ ನಿರ್ವಹಿಸಿದ್ದು, ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿದ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಐವರು ಡಿವೈಎಸ್ಪಿ ನೇತೃತ್ವದ ತಂಡಗಳು ದಾಳಿ ನಡೆಸಿವೆ. ವಿವಿಧ ಆಸ್ತಿಪತ್ರಗಳ ಜೊತೆಗೆ ಲಾಕರ್ನಲ್ಲಿ ಚಿನ್ನ ಪತ್ತೆಯಾಗಿದ್ದು, ಶೋಧ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT