<p><strong>ಮಾಗಡಿ</strong>: ಬೆಂಗಳೂರು-ಮೈಸೂರು ರಸ್ತೆಯ ಪಿಇಎಸ್ ಕಾಲೇಜು ಬಳಿ ಬುಧವಾರ ಬೈಕ್ಗೆ ಕಾರು ಡಿಕ್ಕಿ ಹೊಡೆದು ಬೈಕ್ನಲ್ಲಿದ್ದ ಶಿಕ್ಷಣ ಇಲಾಖೆಯ ಮಹಿಳಾ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಮಾಗಡಿ ಕ್ಷೇತ್ರ ಶಿಕ್ಷಣ ಅಧಿಕಾರಿ (ಬಿಇಒ) ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿ ರಕ್ಷಿತ (26) ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರಕ್ಷಿತ ಮೂಲತಃ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದವರು.</p>.<p>ಬೆಂಗಳೂರಿನ ಬಸವನಗುಡಿ ವಿದ್ಯಾಪೀಠದ ಬಳಿ ಸಹೋದರನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.ಕೆಲಸಕ್ಕಾಗಿ ಪ್ರತಿದಿನ ಬೆಂಗಳೂರಿನಿಂದ ಮಾಗಡಿಗೆ ಬಂದು ಹೋಗುತ್ತಿದ್ದರು.</p>.<p>ಮಾಗಡಿ ರಂಗನಾಥ ಜಾತ್ರೆ ಅಂಗವಾಗಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮತ್ತು ತಾಲ್ಲೂಕು ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ನಡೆದ ಚಿತ್ರಮಂಟಪ ಉತ್ಸವದಲ್ಲಿ ಭಾಗವಹಿಸಿ ದೇವಾಲಯದ ಮುಂಭಾಗ ಶಿಕ್ಷಕಿಯರೊಂದಿಗೆ ನರ್ತಿಸಿ ಎಲ್ಲರ ಗಮನ ಸೆಳೆದಿದ್ದರು. </p>.<p>ಮಾಗಡಿಯಿಂದ ಬೆಂಗಳೂರಿಗೆ ಹೊರಟಿದ್ದ ಅವರು ಬಸ್ನಲ್ಲಿ ಗೊಲ್ಲರಹಟ್ಟಿಗೆ ಬಂದಿದ್ದು, ಅಲ್ಲಿಂದ ತಮ್ಮ ಬೈಕ್ನಲ್ಲಿ ವಿದ್ಯಾಪೀಠದತ್ತ ತೆರಳುವಾಗ ಈಗ ಘಟನೆ ನಡೆದಿದೆ.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಸೇರಿದಂತೆ ತಾಲ್ಲೂಕು ಶಿಕ್ಷಣ ಇಲಾಖೆ ಮೃತರಿಗೆ ಶ್ರದ್ಧಾಂಜಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ಬೆಂಗಳೂರು-ಮೈಸೂರು ರಸ್ತೆಯ ಪಿಇಎಸ್ ಕಾಲೇಜು ಬಳಿ ಬುಧವಾರ ಬೈಕ್ಗೆ ಕಾರು ಡಿಕ್ಕಿ ಹೊಡೆದು ಬೈಕ್ನಲ್ಲಿದ್ದ ಶಿಕ್ಷಣ ಇಲಾಖೆಯ ಮಹಿಳಾ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಮಾಗಡಿ ಕ್ಷೇತ್ರ ಶಿಕ್ಷಣ ಅಧಿಕಾರಿ (ಬಿಇಒ) ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿ ರಕ್ಷಿತ (26) ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರಕ್ಷಿತ ಮೂಲತಃ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದವರು.</p>.<p>ಬೆಂಗಳೂರಿನ ಬಸವನಗುಡಿ ವಿದ್ಯಾಪೀಠದ ಬಳಿ ಸಹೋದರನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.ಕೆಲಸಕ್ಕಾಗಿ ಪ್ರತಿದಿನ ಬೆಂಗಳೂರಿನಿಂದ ಮಾಗಡಿಗೆ ಬಂದು ಹೋಗುತ್ತಿದ್ದರು.</p>.<p>ಮಾಗಡಿ ರಂಗನಾಥ ಜಾತ್ರೆ ಅಂಗವಾಗಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮತ್ತು ತಾಲ್ಲೂಕು ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ನಡೆದ ಚಿತ್ರಮಂಟಪ ಉತ್ಸವದಲ್ಲಿ ಭಾಗವಹಿಸಿ ದೇವಾಲಯದ ಮುಂಭಾಗ ಶಿಕ್ಷಕಿಯರೊಂದಿಗೆ ನರ್ತಿಸಿ ಎಲ್ಲರ ಗಮನ ಸೆಳೆದಿದ್ದರು. </p>.<p>ಮಾಗಡಿಯಿಂದ ಬೆಂಗಳೂರಿಗೆ ಹೊರಟಿದ್ದ ಅವರು ಬಸ್ನಲ್ಲಿ ಗೊಲ್ಲರಹಟ್ಟಿಗೆ ಬಂದಿದ್ದು, ಅಲ್ಲಿಂದ ತಮ್ಮ ಬೈಕ್ನಲ್ಲಿ ವಿದ್ಯಾಪೀಠದತ್ತ ತೆರಳುವಾಗ ಈಗ ಘಟನೆ ನಡೆದಿದೆ.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಸೇರಿದಂತೆ ತಾಲ್ಲೂಕು ಶಿಕ್ಷಣ ಇಲಾಖೆ ಮೃತರಿಗೆ ಶ್ರದ್ಧಾಂಜಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>