ಕನಕಪುರ: ಮಣ್ಣು ತುಂಬಿದ ಟ್ರ್ಯಾಕ್ಟರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವುದು ಹೂಕುಂದ ಸಮೀಪದ ಶ್ರೀರಾಮ ಸಾಗರದಲ್ಲಿ ಗುರುವಾರ ನಡೆದಿದೆ.
ತಮಿಳುನಾಡು ಅಂಚಟ್ಟಿ ಮೂಲದ ಮಾದೇಶ್ (35) ಮೃತರು. ಬುಧವಾರ ಬೆಳಿಗ್ಗೆ ಬೈಕ್ನಲ್ಲಿ ಕೋಡಿಹಳ್ಳಿ ದೊಡ್ಡಾಲಹಳ್ಳಿ ರಸ್ತೆಯಲ್ಲಿ ಹೋಗುತ್ತಿದ್ದಾಗ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ.
ಚಾಲಕ ಮತ್ತು ಟ್ರ್ಯಾಕ್ಟರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.