ರಾಮನಗರ: ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ಯುವಕರನ್ನು ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ತಮ್ಮ ಕಾರಿನಲ್ಲಿ ಕರೆದುಕೊಂಡು ಬಂದು ವೈದ್ಯಕೀಯ ಚಿಕಿತ್ಸೆ ಕೊಡಿಸಿ ಸ್ಪಂದಿಸಿದ್ದಾರೆ.
ಸೋಮವಾರ ಸಂಜೆ ಜಾಲಮಂಗಲ ರಸ್ತೆಯಲ್ಲಿ ಅಪಘಾತದಲ್ಲಿ ಗಾಯ ಗೊಂಡು ಇಬ್ಬರು ರಸ್ತೆಯಲ್ಲಿ ಬಿದ್ದಿದ್ದನ್ನು ಬಾಲಕೃಷ್ಣ ಗಮನಿಸಿ, ತಮ್ಮ ಕಾರಿನಲ್ಲಿ ಗಾಯಾಳುಗಳನ್ನು ರಾಮನಗರದ ರಾಮಕೃಷ್ಣ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದರು.