ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಕರ್ನಾಟಕ ರಾಜ್ಯ ರೈತ ಸಂಘದ ಇಬ್ಬರು ಮುಖಂಡರು ಸಾವು, ಮತ್ತೊಬ್ಬರಿಗೆ ಗಾಯ

Last Updated 22 ಜುಲೈ 2021, 10:13 IST
ಅಕ್ಷರ ಗಾತ್ರ

ರಾಮನಗರ: ಚಿಕ್ಕಮಗಳೂರಿನ ರಾಮನಹಳ್ಳಿ ಸಮೀಪ ಗುರುವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಇಬ್ಬರು ಮುಖಂಡರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ.

ಧಾರವಾಡ ಜಿಲ್ಲೆಯ‌ ನವಲಗುಂದದಲ್ಲಿ ನಡೆದ ರೈತ ಹುತಾತ್ಮ‌ ದಿನಾಚರಣೆಯಲ್ಲಿ‌ ಪಾಲ್ಗೊಂಡು ಹಾಸನ ಜಿಲ್ಲೆಯ‌ ಬೇಲೂರಿಗೆ ಬರುತ್ತಿದ್ದ ವೇಳೆ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬೆಳಿಗ್ಗೆ 7 ಗಂಟೆ ಹೊತ್ತಿಗೆ ಅವಘಡ ಸಂಭವಿಸಿದೆ.

ರಾಜ್ಯ ರೈತ ಸಂಘದ ಮುಖಂಡರಾದ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಅರೇಹಳ್ಳಿಯ ರಾಮಸ್ವಾಮಿ (72) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ, ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಎಚ್‌.ಮೊಗೇನಹಳ್ಳಿ ಗ್ರಾಮದ ಎಂ.ರಾಮು(65) ಅವರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ರವಿಕಿರಣ್‌ (44) ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚನ್ನಪಟ್ಟಣ ತಾಲ್ಲೂಕಿನ ಮೊಗೇನಹಳ್ಳಿಯವರಾದ ರಾಮು ಕಳೆದ ಮೂರು ದಶಕದಿಂದ ರೈತ ಚಳವಳಿಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT