ಮಾಗಡಿ ಕಡೆಯಿಂದ ಬೆಂಗಳೂರಿಗೆ ಹೊರಟಿದ್ದ ಟಾಟಾ ಏಸ್ ವಾಹನವನ್ನು ರಸ್ತೆಯ ಬಲ ಬದಿಯಲ್ಲಿ ನಿಲ್ಲಿಸಿಕೊಂಡು ಅದರೊಳಗೆ ಇದ್ದ ದ್ವಿಚಕ್ರವಾಹನ ಬೀಳದಂತೆ ಹಗ್ಗ ಕಟ್ಟುತ್ತಿದ್ದಾಗ, ನಗರ ಕಡೆಯಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಟಾಟಾ ಏಸ್ ನಜ್ಜುಗುಜ್ಜಾಗಿದೆ. ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ತಾವರೆಕೆರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.