ಬೆಂಗಳೂರು ನಿವಾಸಿ ಅನಂತ್ ಕಾಮತ್ (24) ಮೃತ ಯುವಕ. ರಾಮನಗರದ ಖಾಸಗಿ ಬ್ಯಾಂಕ್ನ ಉದ್ಯೋಗಿಯಾಗಿದ್ದ ಈತ ನಿತ್ಯ ಬೆಂಗಳೂರಿನಿಂದ ರಾಮನಗರಕ್ಕೆ ಕೆಲಸಕ್ಕೆಂದು ಬರುತ್ತಿದ್ದ. ಅಂತೆಯೇ ಬೆಳಗ್ಗೆ ಕೆಲಸಕ್ಕೆ ಬರುತ್ತಿದ್ದ ವೇಳೆ ಟಿಪ್ಪರ್ ಲಾರಿ ಈತನ ಬೈಕ್ಗೆ ಹಿಂಬದಿಯಿಂದ ಡಿಕ್ಕಿಯಾಯಿತು. ಇದರಿಂದಾಗಿ ಆತ ಹೆದ್ದಾರಿಗೆ ಬಿದ್ದು ತಲೆಗೆ ತೀವ್ರ ಪೆಟ್ಟಾಗಿ ಮೃತಪಟ್ಟ ಎಂದು ಪೊಲೀಸರು ತಿಳಿಸಿದರು. ರಾಮನಗರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.