<p><strong>ಕನಕಪುರ:</strong> ತಮಿಳುನಾಡಿನ ಚೆನ್ನೈನ ಎಸ್ಎಸ್ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪೋರ್ಟ್ಸ್ ಫಾರ್ ಚೇಂಜ್ ನ್ಯಾಷನಲ್ ಫೈನಲ್ನಲ್ಲಿ ಅಚ್ಚಲು ಸರ್ಕಾರಿ ಶಾಲೆ ವಾಲಿಬಾಲ್ ತಂಡ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದೆ.</p>.<p>ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಅಚ್ಚಲು ಸರ್ಕಾರಿ ಶಾಲೆಯು ರಾಮನಗರದಲ್ಲಿ ನಡೆದ ಜಿಲ್ಲಾ ಮಟ್ಟದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ಪ್ರತಿನಿಧಿಸಿತ್ತು.</p>.<p>ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದಲ್ಲಿ, ತುಮಕೂರಿನಲ್ಲಿ ನಡೆದ ವಲಯ ಮಟ್ಟದ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿತ್ತು.</p>.<p>ಚೆನ್ನೈನಲ್ಲಿ ನಡೆದ ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ತಮಿಳುನಾಡು ರಾಜ್ಯ ತಂಡದ ಎದುರು 5 ಸೆಟ್ಗಳಲ್ಲಿ ನೇರ ಮೂರು ಸೆಟ್ಗಳನ್ನು ಗೆದ್ದು 3:0 ಅಂತರದಲ್ಲಿ ಗೆದ್ದು ಜಯ ಸಾಧಿಸಿ ಚಿನ್ನದ ಪದಕ ತನ್ನದಾಗಿಸಿ ಕೊಂಡಿದೆ. ತರಬೇತುದಾರ ಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಎಸ್.ನಾಗರಾಜು ಎಲ್ಲ ಹಂತಗಳಲ್ಲೂ ಮಾರ್ಗದರ್ಶಿಯಾಗಿದ್ದರು.</p>.<p>ವಾಲಿಬಾಲ್ ತಂಡವನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಅಚ್ಚಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೃಷ್ಣ, ಪಂಚಾಯಿತಿ ಮಾಜಿ ಅಧ್ಯಕ್ಷ ದೊಡ್ಡಮನೆ ಸತೀಶ್ ಹಾಗೂ ಎಸ್ಡಿಎಂಸಿ ಅಧ್ಯಕ್ಷ ಮತ್ತು ಪದಾಧಿಕಾರಿಗಳು, ಶಾಲೆಯ ಹಿರಿಯ ವಿದ್ಯಾರ್ಥಿಗಳು ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ತಮಿಳುನಾಡಿನ ಚೆನ್ನೈನ ಎಸ್ಎಸ್ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪೋರ್ಟ್ಸ್ ಫಾರ್ ಚೇಂಜ್ ನ್ಯಾಷನಲ್ ಫೈನಲ್ನಲ್ಲಿ ಅಚ್ಚಲು ಸರ್ಕಾರಿ ಶಾಲೆ ವಾಲಿಬಾಲ್ ತಂಡ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದೆ.</p>.<p>ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಅಚ್ಚಲು ಸರ್ಕಾರಿ ಶಾಲೆಯು ರಾಮನಗರದಲ್ಲಿ ನಡೆದ ಜಿಲ್ಲಾ ಮಟ್ಟದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ಪ್ರತಿನಿಧಿಸಿತ್ತು.</p>.<p>ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದಲ್ಲಿ, ತುಮಕೂರಿನಲ್ಲಿ ನಡೆದ ವಲಯ ಮಟ್ಟದ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿತ್ತು.</p>.<p>ಚೆನ್ನೈನಲ್ಲಿ ನಡೆದ ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ತಮಿಳುನಾಡು ರಾಜ್ಯ ತಂಡದ ಎದುರು 5 ಸೆಟ್ಗಳಲ್ಲಿ ನೇರ ಮೂರು ಸೆಟ್ಗಳನ್ನು ಗೆದ್ದು 3:0 ಅಂತರದಲ್ಲಿ ಗೆದ್ದು ಜಯ ಸಾಧಿಸಿ ಚಿನ್ನದ ಪದಕ ತನ್ನದಾಗಿಸಿ ಕೊಂಡಿದೆ. ತರಬೇತುದಾರ ಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಎಸ್.ನಾಗರಾಜು ಎಲ್ಲ ಹಂತಗಳಲ್ಲೂ ಮಾರ್ಗದರ್ಶಿಯಾಗಿದ್ದರು.</p>.<p>ವಾಲಿಬಾಲ್ ತಂಡವನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಅಚ್ಚಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೃಷ್ಣ, ಪಂಚಾಯಿತಿ ಮಾಜಿ ಅಧ್ಯಕ್ಷ ದೊಡ್ಡಮನೆ ಸತೀಶ್ ಹಾಗೂ ಎಸ್ಡಿಎಂಸಿ ಅಧ್ಯಕ್ಷ ಮತ್ತು ಪದಾಧಿಕಾರಿಗಳು, ಶಾಲೆಯ ಹಿರಿಯ ವಿದ್ಯಾರ್ಥಿಗಳು ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>