<p><strong>ಕನಕಪುರ: </strong>ಶಿವನಹಳ್ಳಿ ಮೆಗಾ ಡೈರಿಯಲ್ಲಿ ಆ್ಯಸಿಡ್ನಿಂದ ಗಾಯಗೊಂಡಿದ್ದ ಮೋಹನ್ (20) ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಸಾವನ್ನಪ್ಪಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಕುಟುಂಬಕ್ಕೆ ಸೂಕ್ತ ಪರಿಹಾರನೀಡಬೇಕೆಂದು ಸಿಬ್ಬಂದಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಸಹೋದ್ಯೋಗಿ ಸಾವಿನಿಂದ ಕಂಗಾಲಾದ ಸಿಬ್ಬಂದಿ, ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಸೂಕ್ತ ರಕ್ಷಣೆ ಇಲ್ಲದಿರುವುದೇ ಘಟನೆಗೆ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಿಬ್ಬಂದಿ ಪ್ರಾಣ ರಕ್ಷಣೆಗೆ ಭದ್ರತೆ ನೀಡಿದರೆ ಮಾತ್ರ ಕೆಲಸ ಮಾಡುವುದಾಗಿ ಪಟ್ಟುಹಿಡಿದರು. ಅಧಿಕಾರಿಗಳ ದೌರ್ಜನ್ಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಶಿವನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಕೆ.ವೀರಪ್ಪ ಮಾತನಾಡಿ, ಯಾವುದೇ ಕಾರ್ಮಿಕರಿಗೂ ತೊಂದರೆ ಆಗಬಾರದು. ಈಗಾಗಲೇ ಒಕ್ಕೂಟದ ಆಡಳಿತ ಮಂಡಳಿ ಮೃತರ ಪೋಷಕರೊಂದಿಗೆ ಮಾತನಾಡಿ ಸೂಕ್ತ ಪರಿಹಾರದ ಭರವಸೆ ನೀಡಿದ್ದಾರೆ ಎಂದರು.</p>.<p>ಇದಕ್ಕೆ ಒಪ್ಪಿದ ಕಾರ್ಮಿಕರು ಅಂತಿಮವಾಗಿ ಪ್ರತಿಭಟನೆ ಕೈಬಿಟ್ಟರು. ಬೆಂಗಳೂರು ಹಾಲು ಒಕ್ಕೂಟ ಶಿವನಹಳ್ಳಿ ಬಳಿ ನಿರ್ಮಿಸಿರುವ ಮೆಗಾ ಡೇರಿಯಲ್ಲಿ ಒಟ್ಟು 300ಮಂದಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಮೃತಪಟ್ಟಿರುವ ಮೋಹನ್ 6ತಿಂಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿದ್ದರು.</p>.<p>ಮೃತರ ಅಂತ್ಯಸಂಸ್ಕಾರ ನಲ್ಲಹಳ್ಳಿ ಗ್ರಾಮದಲ್ಲಿ ಶುಕ್ರವಾರ ನೆರವೇರಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ: </strong>ಶಿವನಹಳ್ಳಿ ಮೆಗಾ ಡೈರಿಯಲ್ಲಿ ಆ್ಯಸಿಡ್ನಿಂದ ಗಾಯಗೊಂಡಿದ್ದ ಮೋಹನ್ (20) ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಸಾವನ್ನಪ್ಪಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಕುಟುಂಬಕ್ಕೆ ಸೂಕ್ತ ಪರಿಹಾರನೀಡಬೇಕೆಂದು ಸಿಬ್ಬಂದಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಸಹೋದ್ಯೋಗಿ ಸಾವಿನಿಂದ ಕಂಗಾಲಾದ ಸಿಬ್ಬಂದಿ, ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಸೂಕ್ತ ರಕ್ಷಣೆ ಇಲ್ಲದಿರುವುದೇ ಘಟನೆಗೆ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಿಬ್ಬಂದಿ ಪ್ರಾಣ ರಕ್ಷಣೆಗೆ ಭದ್ರತೆ ನೀಡಿದರೆ ಮಾತ್ರ ಕೆಲಸ ಮಾಡುವುದಾಗಿ ಪಟ್ಟುಹಿಡಿದರು. ಅಧಿಕಾರಿಗಳ ದೌರ್ಜನ್ಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಶಿವನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಕೆ.ವೀರಪ್ಪ ಮಾತನಾಡಿ, ಯಾವುದೇ ಕಾರ್ಮಿಕರಿಗೂ ತೊಂದರೆ ಆಗಬಾರದು. ಈಗಾಗಲೇ ಒಕ್ಕೂಟದ ಆಡಳಿತ ಮಂಡಳಿ ಮೃತರ ಪೋಷಕರೊಂದಿಗೆ ಮಾತನಾಡಿ ಸೂಕ್ತ ಪರಿಹಾರದ ಭರವಸೆ ನೀಡಿದ್ದಾರೆ ಎಂದರು.</p>.<p>ಇದಕ್ಕೆ ಒಪ್ಪಿದ ಕಾರ್ಮಿಕರು ಅಂತಿಮವಾಗಿ ಪ್ರತಿಭಟನೆ ಕೈಬಿಟ್ಟರು. ಬೆಂಗಳೂರು ಹಾಲು ಒಕ್ಕೂಟ ಶಿವನಹಳ್ಳಿ ಬಳಿ ನಿರ್ಮಿಸಿರುವ ಮೆಗಾ ಡೇರಿಯಲ್ಲಿ ಒಟ್ಟು 300ಮಂದಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಮೃತಪಟ್ಟಿರುವ ಮೋಹನ್ 6ತಿಂಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿದ್ದರು.</p>.<p>ಮೃತರ ಅಂತ್ಯಸಂಸ್ಕಾರ ನಲ್ಲಹಳ್ಳಿ ಗ್ರಾಮದಲ್ಲಿ ಶುಕ್ರವಾರ ನೆರವೇರಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>