"ಹಿಂದೆ ವಿವಿಧೆಡೆ ಕೆಲಸ ಮಾಡಿದ ಅನುಭವ ನನಗಿದೆ. ಸದ್ಯ ಜಿಲ್ಲೆಯಲ್ಲಿ ಅಧಿಕಾರಿಗಳ ಉತ್ತಮ ತಂಡವಿದೆ. ಕಾನೂನು ಸುವ್ಯಸ್ಥೆ ಕಾಪಾಡುವುದು ನಮ್ಮ ಮೊದಲ ಆದ್ಯತೆ. ಹಿಂದಿನ ಎಸ್ಪಿ ಅನೂಪ್ ಶೆಟ್ಟಿ ಉತ್ತಮ ಕೆಲಸ ಮಾಡಿದ್ದಾರೆ. ಅದನ್ನು ಮುಂದುವರಿಸಿಕೊಂಡು ಹೋಗಲಾಗುವುದು. ಜೂಜು, ಅಕ್ರಮ ಮದ್ಯ ಮಾರಾಟ, ಮರಳು ಗಣಿಗಾರಿಕೆ ಸೇರಿದಂತೆ ಯಾವುದೇ ಸಕ್ರಮ ಎಲ್ಲ ಅಕ್ರಮ ಚಟುವಟಿಕೆಗಳ ಮೇಲಿನ ದಾಳಿ ಮುಂದುವರಿಯಲಿದೆ’ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.