ಕರ್ನಾಟಕ ರಾಜ್ಯ ಮಾದಿಗ ದಂಡೋರ ಉಪಾಧ್ಯಕ್ಷ ಬುಳ್ಳಹಳ್ಳಿ ರಾಜಪ್ಪ ಅವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ತ್ವರಿತವಾಗಿ ಮಾರ್ಗದರ್ಶಿ ಬ್ಯಾಂಕಿನ ವ್ಯವಸ್ಥಾಪಕರು ಹಾಗೂ ಆಯಾ ಶಾಖಾ ವ್ಯವಸ್ಥಾಪಕರು, ಅಂಬೇಡ್ಕರ್ ಅಭಿವೃದ್ಧಿ ನಿಗಮ, ಬಾಬು ಜಗಜೀವನರಾಂ ಅಭಿವೃದ್ಧಿ ನಿಗಮ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಮಹಿಳೆಯರಿಗೆ ಸಿಗಬೇಕಾಗಿರುವ ಸೌಲಭ್ಯಗಳನ್ನು ಅರ್ಹರಿಗೆ ಕಲ್ಪಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಭರವಸೆ ನೀಡಿದರು.