<p><strong>ಚನ್ನಪಟ್ಟಣ:</strong> ‘ರಾಜಕೀಯ ಪ್ರವೇಶ ಸೇರಿದಂತೆ ಯಾವುದೇ ನಿರ್ಧಾರ ಕೈಗೊಂಡರೂ ಕ್ಷೇತ್ರದ ಎಲ್ಲರಿಗೂ ತಿಳಿಸಿಯೇ ಕೈಗೊಳ್ಳುತ್ತೇನೆ’ ಎಂದು ನಟ ಅಭಿಷೇಕ್ ಅಂಬರೀಶ್ ಹೇಳಿದರು.</p>.<p>ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಬುಧವಾರ ಅಂಬರೀಶ್ ಅಭಿಮಾನಿಗಳ ಸಂಘ ಏರ್ಪಡಿಸಿದ್ದ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.<br />‘ಪ್ರೀತಿ ಇದ್ದ ಕಡೆ ನಾನು ಇರುತ್ತೇನೆ. ಸದ್ಯಕ್ಕೆ ‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಶೂಟಿಂಗ್ ಮುಗಿದಿದೆ. ಸದ್ಯದಲ್ಲೇ ಇದು ತೆರೆಗೆ ಬರಲಿದೆ. ‘ಕಾಳಿ’ ಚಿತ್ರದ ಜೊತೆಗೆ ಮತ್ತೊಂದು ಚಿತ್ರ ಇದೆ. ಸದ್ಯಕ್ಕೆ ಇದರಲ್ಲಿ ಬ್ಯುಸಿಯಾಗಿದ್ದೇನೆ’ ಎಂದು ಅವರು ಪ್ರತಿಕ್ರಿಯಿಸಿದರು.</p>.<p>‘ನಾನು ಸರ್ಕಾರಕ್ಕೆ ಸಲಹೆ ಕೊಡುವಷ್ಟು ದೊಡ್ಡವನಲ್ಲ. ಆದರೆ ಸರ್ಕಾರಿ ಶಾಲೆಗಳು ಉಳಿಯಬೇಕು. ಇದರ ಬಗ್ಗೆ ಚಿಂತಿಸಲಿ. ಈಗ ಬಹಳಷ್ಟು ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ. ಈ ಸಮಸ್ಯೆಗೆ ಆದಷ್ಟು ಬೇಗ ಪರಿಹಾರ ಕೊಡಲಿ’ ಎಂದು ಮನವಿ ಅವರು ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ‘ರಾಜಕೀಯ ಪ್ರವೇಶ ಸೇರಿದಂತೆ ಯಾವುದೇ ನಿರ್ಧಾರ ಕೈಗೊಂಡರೂ ಕ್ಷೇತ್ರದ ಎಲ್ಲರಿಗೂ ತಿಳಿಸಿಯೇ ಕೈಗೊಳ್ಳುತ್ತೇನೆ’ ಎಂದು ನಟ ಅಭಿಷೇಕ್ ಅಂಬರೀಶ್ ಹೇಳಿದರು.</p>.<p>ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಬುಧವಾರ ಅಂಬರೀಶ್ ಅಭಿಮಾನಿಗಳ ಸಂಘ ಏರ್ಪಡಿಸಿದ್ದ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.<br />‘ಪ್ರೀತಿ ಇದ್ದ ಕಡೆ ನಾನು ಇರುತ್ತೇನೆ. ಸದ್ಯಕ್ಕೆ ‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಶೂಟಿಂಗ್ ಮುಗಿದಿದೆ. ಸದ್ಯದಲ್ಲೇ ಇದು ತೆರೆಗೆ ಬರಲಿದೆ. ‘ಕಾಳಿ’ ಚಿತ್ರದ ಜೊತೆಗೆ ಮತ್ತೊಂದು ಚಿತ್ರ ಇದೆ. ಸದ್ಯಕ್ಕೆ ಇದರಲ್ಲಿ ಬ್ಯುಸಿಯಾಗಿದ್ದೇನೆ’ ಎಂದು ಅವರು ಪ್ರತಿಕ್ರಿಯಿಸಿದರು.</p>.<p>‘ನಾನು ಸರ್ಕಾರಕ್ಕೆ ಸಲಹೆ ಕೊಡುವಷ್ಟು ದೊಡ್ಡವನಲ್ಲ. ಆದರೆ ಸರ್ಕಾರಿ ಶಾಲೆಗಳು ಉಳಿಯಬೇಕು. ಇದರ ಬಗ್ಗೆ ಚಿಂತಿಸಲಿ. ಈಗ ಬಹಳಷ್ಟು ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ. ಈ ಸಮಸ್ಯೆಗೆ ಆದಷ್ಟು ಬೇಗ ಪರಿಹಾರ ಕೊಡಲಿ’ ಎಂದು ಮನವಿ ಅವರು ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>