<p><strong>ಕನಕಪುರ</strong>: ಕೊಲೆ ಆರೋಪ ಹೊತ್ತಿರುವ ಚಿತ್ರನಟ ದರ್ಶನ್ ಅವರನ್ನು ಚಿತ್ರರಂಗ ನಿಷೇಧ ಮಾಡಬೇಕು. ಅವರಿಗೆ ತ್ವರಿತವಾಗಿ ನ್ಯಾಯಾಲಯ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಶುಕ್ರವಾರ ಮನವಿ ಸಲ್ಲಿಸಿದರು.</p>.<p>ಇಲ್ಲಿನ ತಾಲ್ಲೂಕು ಕಚೇರಿ ಆಡಳಿತ ಸೌಧ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಮುಖಂಡರು ನೂರಾರು ಸಂಖ್ಯೆಯಲ್ಲಿ ಸೇರಿ ದರ್ಶನ್ ಕೊಲೆ ಆರೋಪ ಕೃತ್ಯವನ್ನು ಖಂಡಿಸಿದರು. ಸಮಾಜಕ್ಕೆ ಒಳ್ಳೆಯ ಸಂದೇಶ ಕೊಡಬೇಕಿದ್ದ ನಟ, ಸಮಾಜಕ್ಕೆ ಕಳಂಕ ತಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. </p>.<p>ಲಕ್ಷಾಂತರ ಅಭಿಮಾನಿಗಳು ಇವರನ್ನು ಆರಾಧಿಸುತ್ತಿದ್ದರು. ಆದರೆ, ಅಭಿಮಾನಕ್ಕೆ ಯೋಗ್ಯರಲ್ಲ. ಅಭಿಮಾನಿಗಳಿಗೆ ನೋವುಂಟು ಮಾಡಿದ್ದಾರೆ. ಅವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.</p>.<p>ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ, ಪದಾಧಿಕಾರಿಗಳಾದ ಚೀಲೂರು ಮುನಿರಾಜು, ನಲ್ಲಳ್ಳಿ ಶ್ರೀನಿವಾಸ್, ಪ್ರಶಾಂತ, ದಿನೇಶ್, ಚಿಕ್ಕರಂಗಯ್ಯ, ಗಬ್ಬಾಡಿ ಕಾಡೇಗೌಡ, ಪರಮೇಶ್, ಎಚ್.ವೆಂಕಟೇಶ್, ಕೆಂಡೇಗೌಡ, ಟಿ.ಎಂ.ರಾಮಯ್ಯ, ಎಂ.ನಾಗರಾಜು, ದಿಲೀಪ್, ಸ್ವಾಮಿಗೌಡ, ನಾಗರಾಜು ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಕೊಲೆ ಆರೋಪ ಹೊತ್ತಿರುವ ಚಿತ್ರನಟ ದರ್ಶನ್ ಅವರನ್ನು ಚಿತ್ರರಂಗ ನಿಷೇಧ ಮಾಡಬೇಕು. ಅವರಿಗೆ ತ್ವರಿತವಾಗಿ ನ್ಯಾಯಾಲಯ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಶುಕ್ರವಾರ ಮನವಿ ಸಲ್ಲಿಸಿದರು.</p>.<p>ಇಲ್ಲಿನ ತಾಲ್ಲೂಕು ಕಚೇರಿ ಆಡಳಿತ ಸೌಧ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಮುಖಂಡರು ನೂರಾರು ಸಂಖ್ಯೆಯಲ್ಲಿ ಸೇರಿ ದರ್ಶನ್ ಕೊಲೆ ಆರೋಪ ಕೃತ್ಯವನ್ನು ಖಂಡಿಸಿದರು. ಸಮಾಜಕ್ಕೆ ಒಳ್ಳೆಯ ಸಂದೇಶ ಕೊಡಬೇಕಿದ್ದ ನಟ, ಸಮಾಜಕ್ಕೆ ಕಳಂಕ ತಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. </p>.<p>ಲಕ್ಷಾಂತರ ಅಭಿಮಾನಿಗಳು ಇವರನ್ನು ಆರಾಧಿಸುತ್ತಿದ್ದರು. ಆದರೆ, ಅಭಿಮಾನಕ್ಕೆ ಯೋಗ್ಯರಲ್ಲ. ಅಭಿಮಾನಿಗಳಿಗೆ ನೋವುಂಟು ಮಾಡಿದ್ದಾರೆ. ಅವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.</p>.<p>ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ, ಪದಾಧಿಕಾರಿಗಳಾದ ಚೀಲೂರು ಮುನಿರಾಜು, ನಲ್ಲಳ್ಳಿ ಶ್ರೀನಿವಾಸ್, ಪ್ರಶಾಂತ, ದಿನೇಶ್, ಚಿಕ್ಕರಂಗಯ್ಯ, ಗಬ್ಬಾಡಿ ಕಾಡೇಗೌಡ, ಪರಮೇಶ್, ಎಚ್.ವೆಂಕಟೇಶ್, ಕೆಂಡೇಗೌಡ, ಟಿ.ಎಂ.ರಾಮಯ್ಯ, ಎಂ.ನಾಗರಾಜು, ದಿಲೀಪ್, ಸ್ವಾಮಿಗೌಡ, ನಾಗರಾಜು ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>