<p><strong>ಚನ್ನಪಟ್ಟಣ: </strong>ಶಾಸಕ ಎಚ್.ಡಿ.ಕುಮಾರಸ್ವಾಮಿ ಅವರು ತಾಲ್ಲೂಕಿನ ಸಮಗ್ರ ಅಭಿವೃದ್ಧಿ ವಿಚಾರದಲ್ಲಿ ಗಮನಹರಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಗಂಗಾಧರ್ ಒತ್ತಾಯಿಸಿದರು.</p>.<p>ಪಟ್ಟಣದ ತಾಲ್ಲೂಕು ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಕೊರೊನಾ ನೆಪವಾಗಿಟ್ಟುಕೊಂಡು ಸ್ಥಳೀಯ ಆಡಳಿತಗಳು ಅಭಿವೃದ್ಧಿ ಮರೆತಿವೆ. ಗ್ರಾಮೀಣ ಹಾಗೂ ನಗರ ಭಾಗದಲ್ಲಿ ಜನರು ಮೂಲ ಸೌಲಭ್ಯಗಳಿಂದ ವಂಚಿತರಾಗಿ ಸಮಸ್ಯೆ ಎದುರಿಸುವಂತಾಗಿದೆ. ಇದನ್ನು ಶಾಸಕರು ಗಮನಿಸಬೇಕು ಎಂದರು.</p>.<p>ಗ್ರಾಮೀಣ ಭಾಗದಲ್ಲಿ ರಸ್ತೆ, ಚರಂಡಿ ಸೇರಿದಂತೆ ಹಲವು ಸಮಸ್ಯೆಗಳಿವೆ. ರಸ್ತೆಗಳು ಹದಗೆಟ್ಟು ಸಂಚರಿಸಲು ಸಾಧ್ಯವಾಗದ ಸ್ಥಿತಿ ಇದೆ. ಚರಂಡಿಗಳು ಕಟ್ಟಿಕೊಂಡು ನೀರು ಸರಾಗವಾಗಿ ಹರಿದುಹೋಗದೆ ಸಮಸ್ಯೆಯಾಗಿದೆ. ಇದನ್ನೆಲ್ಲ ಸರಿಪಡಿಸಬೇಕಾದ ಸ್ಥಳೀಯ ಆಡಳಿತ ನಿಷ್ಕ್ರಿಯವಾಗಿವೆ. ಈ ಬಗ್ಗೆ ಶಾಸಕರೂ ಸಹ ಗಮನಹರಿಸುತ್ತಿಲ್ಲ ಎಂದು ಆರೋಪಿಸಿದರು.</p>.<p>ಪಟ್ಟಣ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಕಸ ಬಿದ್ದು ಗಬ್ಬು ನಾರುತ್ತಿದೆ. ನಗರಸಭೆ ಸದಸ್ಯರು ಇಲ್ಲದ ಕಾರಣ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದರು</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಸಿ.ವೀರೇಗೌಡ, ಶಿವಮಾದು, ಮುಖಂಡರಾದ ಶರತ್ ಚಂದ್ರ, ಎಸ್.ಸಿ.ಶೇಖರ್, ಮತ್ತೀಕೆರೆ ಹನುಮಂತಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ: </strong>ಶಾಸಕ ಎಚ್.ಡಿ.ಕುಮಾರಸ್ವಾಮಿ ಅವರು ತಾಲ್ಲೂಕಿನ ಸಮಗ್ರ ಅಭಿವೃದ್ಧಿ ವಿಚಾರದಲ್ಲಿ ಗಮನಹರಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಗಂಗಾಧರ್ ಒತ್ತಾಯಿಸಿದರು.</p>.<p>ಪಟ್ಟಣದ ತಾಲ್ಲೂಕು ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಕೊರೊನಾ ನೆಪವಾಗಿಟ್ಟುಕೊಂಡು ಸ್ಥಳೀಯ ಆಡಳಿತಗಳು ಅಭಿವೃದ್ಧಿ ಮರೆತಿವೆ. ಗ್ರಾಮೀಣ ಹಾಗೂ ನಗರ ಭಾಗದಲ್ಲಿ ಜನರು ಮೂಲ ಸೌಲಭ್ಯಗಳಿಂದ ವಂಚಿತರಾಗಿ ಸಮಸ್ಯೆ ಎದುರಿಸುವಂತಾಗಿದೆ. ಇದನ್ನು ಶಾಸಕರು ಗಮನಿಸಬೇಕು ಎಂದರು.</p>.<p>ಗ್ರಾಮೀಣ ಭಾಗದಲ್ಲಿ ರಸ್ತೆ, ಚರಂಡಿ ಸೇರಿದಂತೆ ಹಲವು ಸಮಸ್ಯೆಗಳಿವೆ. ರಸ್ತೆಗಳು ಹದಗೆಟ್ಟು ಸಂಚರಿಸಲು ಸಾಧ್ಯವಾಗದ ಸ್ಥಿತಿ ಇದೆ. ಚರಂಡಿಗಳು ಕಟ್ಟಿಕೊಂಡು ನೀರು ಸರಾಗವಾಗಿ ಹರಿದುಹೋಗದೆ ಸಮಸ್ಯೆಯಾಗಿದೆ. ಇದನ್ನೆಲ್ಲ ಸರಿಪಡಿಸಬೇಕಾದ ಸ್ಥಳೀಯ ಆಡಳಿತ ನಿಷ್ಕ್ರಿಯವಾಗಿವೆ. ಈ ಬಗ್ಗೆ ಶಾಸಕರೂ ಸಹ ಗಮನಹರಿಸುತ್ತಿಲ್ಲ ಎಂದು ಆರೋಪಿಸಿದರು.</p>.<p>ಪಟ್ಟಣ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಕಸ ಬಿದ್ದು ಗಬ್ಬು ನಾರುತ್ತಿದೆ. ನಗರಸಭೆ ಸದಸ್ಯರು ಇಲ್ಲದ ಕಾರಣ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದರು</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಸಿ.ವೀರೇಗೌಡ, ಶಿವಮಾದು, ಮುಖಂಡರಾದ ಶರತ್ ಚಂದ್ರ, ಎಸ್.ಸಿ.ಶೇಖರ್, ಮತ್ತೀಕೆರೆ ಹನುಮಂತಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>