ತಹಶೀಲ್ದಾರ್ ವಿ.ಆರ್. ವಿಶ್ವನಾಥ್ ಮಾತನಾಡಿ, ಹಿಂದಿನ ಕಾಲದಲ್ಲಿ ಹಳೆಯ ಸಂಪ್ರದಾಯದಂತೆ ನಾವು ಇಂದು ನಡೆದುಕೊಳ್ಳಲು ಆಗುವುದಿಲ್ಲ. ಸಂವಿಧಾನದಡಿ ಎಲ್ಲರೂ ಒಟ್ಟಾಗಿ ಸಮಾನತೆಯಿಂದ ಬಾಳಬೇಕು. ಹಿಂದಿನ ಸಂಪ್ರದಾಯಗಳು ಏನೇ ಇರಲಿ. ದೇವಾಲಯಗಳಲ್ಲಿ ಎಲ್ಲರಿಗೂ ಅವಕಾಶ ನೀಡಬೇಕು. ಅದಕ್ಕೆ ಯಾರು ಅಡ್ಡಿಪಡಿಸಬಾರದು ಎಂದು ಸಲಹೆ ನೀಡಿದರು.