<p><strong>ಕುದೂರು(ಮಾಗಡಿ): </strong>ರೈತರ ಋಣ ತೀರಿಸಲು ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವುದು ಪುಣ್ಯದ ಕೆಲಸ ಎಂದು ‘ಅವಿರತ ಚಾರಣಿಗರ ತಂಡ’ದ ಯತೀಶ್ ಕುಮಾರ್ ಅಭಿಪ್ರಾಯಪಟ್ಟರು. </p>.<p>ಚಾರಣಿಗರ ತಂಡದಿಂದ 11ನೇ ವರ್ಷದ ಅಂಗವಾಗಿ ಉಚಿತ ನೋಟ್ ಪುಸ್ತಕ ವಿತರಿಸಿ ಅವರು ಮಾತನಾಡಿದರು.</p>.<p>ಬಹುರಾಷ್ಟ್ರೀಯ ಕಂಪನಿಗಳು ಮತ್ತು ಉದ್ಯಮಿಗಳು ಬಡವರ ಮಕ್ಕಳನ್ನು ದತ್ತು ಸ್ವೀಕರಿಸಿ ಶಿಕ್ಷಣ ಕೊಡಿಸಿ ರೈತರ ಋಣ ತೀರಿಸಲು ಮುಂದಾಗಬೇಕು ಎಂದರು.</p>.<p>ಚಾರಣಿಗರ ತಂಡದ ಸದಸ್ಯೆ ತೇಜಸ್ವಿನಿ ಮಾತನಾಡಿ, ಗ್ರಾಮೀಣ ಭಾಗದ ಬಡ ಬಾಲಕಿಯರಿಗೆ ಎಲ್ಲರೂ ಹೆಚ್ಚಿನ ನೆರವು ನೀಡಿ ಅವರ ಜೀವನ ಸುಧಾರಣೆಗೆ ಪ್ರೋತ್ಸಾಹ ನೀಡಬೇಕು ಎಂದರು.</p>.<p>ಸದಸ್ಯರಾದ ಗಣಪತಿ ಭಟ್, ಜಗದಾಂಬ, ಶ್ರೀನಿವಾಸಯ್ಯ, ಲಾವಣ್ಯ ಚನ್ನಪ್ಪ, ಅರುಣ್ ಕುಮಾರ್, ಲಕ್ಷ್ಮೀನಾರಾಯಣ್, ಶಂಕರ್, ಸುಮಂತ್, ಕೇಶವ್ ಇದ್ದರು.</p>.<p>ಒಂಭತ್ತನಗುಂಟೆ, ಗೊಲ್ಲಹಳ್ಳಿ, ತಿಪ್ಪಸಂದ್ರ ಹೋಬಳಿ ಬಸವನಪಾಳ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಉಚಿತ ಪುಸ್ತಕ ವಿತರಿಸಲಾಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕುದೂರು(ಮಾಗಡಿ): </strong>ರೈತರ ಋಣ ತೀರಿಸಲು ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವುದು ಪುಣ್ಯದ ಕೆಲಸ ಎಂದು ‘ಅವಿರತ ಚಾರಣಿಗರ ತಂಡ’ದ ಯತೀಶ್ ಕುಮಾರ್ ಅಭಿಪ್ರಾಯಪಟ್ಟರು. </p>.<p>ಚಾರಣಿಗರ ತಂಡದಿಂದ 11ನೇ ವರ್ಷದ ಅಂಗವಾಗಿ ಉಚಿತ ನೋಟ್ ಪುಸ್ತಕ ವಿತರಿಸಿ ಅವರು ಮಾತನಾಡಿದರು.</p>.<p>ಬಹುರಾಷ್ಟ್ರೀಯ ಕಂಪನಿಗಳು ಮತ್ತು ಉದ್ಯಮಿಗಳು ಬಡವರ ಮಕ್ಕಳನ್ನು ದತ್ತು ಸ್ವೀಕರಿಸಿ ಶಿಕ್ಷಣ ಕೊಡಿಸಿ ರೈತರ ಋಣ ತೀರಿಸಲು ಮುಂದಾಗಬೇಕು ಎಂದರು.</p>.<p>ಚಾರಣಿಗರ ತಂಡದ ಸದಸ್ಯೆ ತೇಜಸ್ವಿನಿ ಮಾತನಾಡಿ, ಗ್ರಾಮೀಣ ಭಾಗದ ಬಡ ಬಾಲಕಿಯರಿಗೆ ಎಲ್ಲರೂ ಹೆಚ್ಚಿನ ನೆರವು ನೀಡಿ ಅವರ ಜೀವನ ಸುಧಾರಣೆಗೆ ಪ್ರೋತ್ಸಾಹ ನೀಡಬೇಕು ಎಂದರು.</p>.<p>ಸದಸ್ಯರಾದ ಗಣಪತಿ ಭಟ್, ಜಗದಾಂಬ, ಶ್ರೀನಿವಾಸಯ್ಯ, ಲಾವಣ್ಯ ಚನ್ನಪ್ಪ, ಅರುಣ್ ಕುಮಾರ್, ಲಕ್ಷ್ಮೀನಾರಾಯಣ್, ಶಂಕರ್, ಸುಮಂತ್, ಕೇಶವ್ ಇದ್ದರು.</p>.<p>ಒಂಭತ್ತನಗುಂಟೆ, ಗೊಲ್ಲಹಳ್ಳಿ, ತಿಪ್ಪಸಂದ್ರ ಹೋಬಳಿ ಬಸವನಪಾಳ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಉಚಿತ ಪುಸ್ತಕ ವಿತರಿಸಲಾಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>