<p><strong>ಚನ್ನಪಟ್ಟಣ: </strong>ಅಳಿವಿನಂಚಿನಲ್ಲಿರುವ ಜನಪದ ಕಲೆಗಳನ್ನು ಉಳಿಸಲು ನಿರಂತರವಾಗಿ ಶ್ರಮಿಸುತ್ತಿರುವ ಸಂಘ, ಸಂಸ್ಥೆಗಳ ಕಾರ್ಯ ಶ್ಲಾಘನೀಯವಾದುದು ಎಂದು ವಂದಾರಗುಪ್ಪೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕುಮಾರ್ ಪ್ರಶಂಸಿಸಿದರು.</p>.<p>ತಾಲ್ಲೂಕಿನ ಮುನಿಯಪ್ಪನದೊಡ್ಡಿ ಗ್ರಾಮದ ಚಿಕ್ಕ ತಿರುಪತಿ ವೆಂಕಟರಮಣಸ್ವಾಮಿ ದೇವಾಲಯದ ಆವರಣದಲ್ಲಿ ಪಂಚಮುಖಿ ಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಬುಧವಾರ ನಡೆದ ಜನಪದ ಉತ್ಸವ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.</p>.<p>ಎಂದೆಂದಿಗೂ ಸಾವಿಲ್ಲದ ಸಾಂಸ್ಕೃತಿಕ ಪರಂಪರೆಯ ಪ್ರತಿಬಿಂಬವಾದ ಜನಪದ ಕಲೆಗಳನ್ನು ಪೋಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.</p>.<p>ಕಲಾವಿದ ಜಯಸಿಂಹ ಮಾತನಾಡಿ, ಜನಪದ ಕಲೆ ನಿಂತ ನೀರಾಗದೆ ಹರಿಯುವ ನೀರಾಗಬೇಕು. ಆ ನಿಟ್ಟಿನಲ್ಲಿ ಸಂಘ, ಸಂಸ್ಥೆಗಳು ಶ್ರಮಿಸುತ್ತಿದ್ದು ಸರ್ಕಾರ ಹೆಚ್ಚಿನ ಅನುದಾನ ನೀಡುವ ಮೂಲಕ ಕಲೆ ಮತ್ತು ಸಂಸ್ಕೃತಿ ಉತ್ಸವದಂತಹ ಮಾನವೀಯ ಹಾಗೂ ಮನರಂಜನಾತ್ಮಕ ಕಾರ್ಯಕ್ರಮಗಳಿಗೆ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವೆಂಕಟರಮಣಸ್ವಾಮಿ ದೇವಾಲಯದ ಅರ್ಚಕ ಪುಟ್ಟಸ್ವಾಮೀಜಿ ಮಾತನಾಡಿ, ಸಂಘ, ಸಂಸ್ಥೆಗಳು ಜನಪದ ಕಲೆಯನ್ನು ಉಳಿಸಿ ಬೆಳೆಸುವುದರ ಜೊತೆ ಜೊತೆಗೆ ಕಲಾವಿದರನ್ನು ಬೆಳೆಸುವ ಮೂಲಕ ಸಮಾಜಮುಖಿಯಾಗಿ ಚಿಂತಿಸಬೇಕು. ತೆರೆಮರೆಯಲ್ಲಿ ನೂರಾರು ಕಲಾವಿದರಿದ್ದು ಅವರಿಗೆ ವೇದಿಕೆ ಕಲ್ಪಿಸಬೇಕು ಎಂದರು.</p>.<p>ಕಲಾವಿದರಾದ ರಾಂಪುರ ಸಿದ್ದರಾಜು ಮತ್ತು ತಂಡ, ತಂಬೂರಿ ಶಿವಣ್ಣ, ಮಲ್ಲಯ್ಯ, ರಘು ಮತ್ತು ತಂಡ ಜನಪದ, ತತ್ವಪದ, ವಚನಗಳ ಗಾಯನ ನಡೆಸಿಕೊಟ್ಟಿತು.ಕಲಾವಿದ ಮಧು ಕೂಡ್ಲೂರು ಸೋಮನ ಕುಣಿತ, ಪರಮೇಶ್ವರ ತಂಡ ಗೊರವರ ಕುಣಿತ, ವೀರಗಾಸೆ, ಪೂಜಾ ಕುಣಿತ, ತಮಟೆ ವಾದನ ನಡೆಸಿಕೊಟ್ಟರು.</p>.<p>ಉಪನ್ಯಾಸಕ ಬಿ.ಪಿ. ಸುರೇಶ್ ನಿರೂಪಿಸಿದರು. ಆರ್.ಕೆ. ಸ್ವಾಮಿ ಸ್ವಾಗತಿಸಿದರು. ಕಲಾವಿದ ಎಂ.ಪಿ. ಮರಿಸ್ವಾಮಿ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ: </strong>ಅಳಿವಿನಂಚಿನಲ್ಲಿರುವ ಜನಪದ ಕಲೆಗಳನ್ನು ಉಳಿಸಲು ನಿರಂತರವಾಗಿ ಶ್ರಮಿಸುತ್ತಿರುವ ಸಂಘ, ಸಂಸ್ಥೆಗಳ ಕಾರ್ಯ ಶ್ಲಾಘನೀಯವಾದುದು ಎಂದು ವಂದಾರಗುಪ್ಪೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕುಮಾರ್ ಪ್ರಶಂಸಿಸಿದರು.</p>.<p>ತಾಲ್ಲೂಕಿನ ಮುನಿಯಪ್ಪನದೊಡ್ಡಿ ಗ್ರಾಮದ ಚಿಕ್ಕ ತಿರುಪತಿ ವೆಂಕಟರಮಣಸ್ವಾಮಿ ದೇವಾಲಯದ ಆವರಣದಲ್ಲಿ ಪಂಚಮುಖಿ ಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಬುಧವಾರ ನಡೆದ ಜನಪದ ಉತ್ಸವ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.</p>.<p>ಎಂದೆಂದಿಗೂ ಸಾವಿಲ್ಲದ ಸಾಂಸ್ಕೃತಿಕ ಪರಂಪರೆಯ ಪ್ರತಿಬಿಂಬವಾದ ಜನಪದ ಕಲೆಗಳನ್ನು ಪೋಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.</p>.<p>ಕಲಾವಿದ ಜಯಸಿಂಹ ಮಾತನಾಡಿ, ಜನಪದ ಕಲೆ ನಿಂತ ನೀರಾಗದೆ ಹರಿಯುವ ನೀರಾಗಬೇಕು. ಆ ನಿಟ್ಟಿನಲ್ಲಿ ಸಂಘ, ಸಂಸ್ಥೆಗಳು ಶ್ರಮಿಸುತ್ತಿದ್ದು ಸರ್ಕಾರ ಹೆಚ್ಚಿನ ಅನುದಾನ ನೀಡುವ ಮೂಲಕ ಕಲೆ ಮತ್ತು ಸಂಸ್ಕೃತಿ ಉತ್ಸವದಂತಹ ಮಾನವೀಯ ಹಾಗೂ ಮನರಂಜನಾತ್ಮಕ ಕಾರ್ಯಕ್ರಮಗಳಿಗೆ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವೆಂಕಟರಮಣಸ್ವಾಮಿ ದೇವಾಲಯದ ಅರ್ಚಕ ಪುಟ್ಟಸ್ವಾಮೀಜಿ ಮಾತನಾಡಿ, ಸಂಘ, ಸಂಸ್ಥೆಗಳು ಜನಪದ ಕಲೆಯನ್ನು ಉಳಿಸಿ ಬೆಳೆಸುವುದರ ಜೊತೆ ಜೊತೆಗೆ ಕಲಾವಿದರನ್ನು ಬೆಳೆಸುವ ಮೂಲಕ ಸಮಾಜಮುಖಿಯಾಗಿ ಚಿಂತಿಸಬೇಕು. ತೆರೆಮರೆಯಲ್ಲಿ ನೂರಾರು ಕಲಾವಿದರಿದ್ದು ಅವರಿಗೆ ವೇದಿಕೆ ಕಲ್ಪಿಸಬೇಕು ಎಂದರು.</p>.<p>ಕಲಾವಿದರಾದ ರಾಂಪುರ ಸಿದ್ದರಾಜು ಮತ್ತು ತಂಡ, ತಂಬೂರಿ ಶಿವಣ್ಣ, ಮಲ್ಲಯ್ಯ, ರಘು ಮತ್ತು ತಂಡ ಜನಪದ, ತತ್ವಪದ, ವಚನಗಳ ಗಾಯನ ನಡೆಸಿಕೊಟ್ಟಿತು.ಕಲಾವಿದ ಮಧು ಕೂಡ್ಲೂರು ಸೋಮನ ಕುಣಿತ, ಪರಮೇಶ್ವರ ತಂಡ ಗೊರವರ ಕುಣಿತ, ವೀರಗಾಸೆ, ಪೂಜಾ ಕುಣಿತ, ತಮಟೆ ವಾದನ ನಡೆಸಿಕೊಟ್ಟರು.</p>.<p>ಉಪನ್ಯಾಸಕ ಬಿ.ಪಿ. ಸುರೇಶ್ ನಿರೂಪಿಸಿದರು. ಆರ್.ಕೆ. ಸ್ವಾಮಿ ಸ್ವಾಗತಿಸಿದರು. ಕಲಾವಿದ ಎಂ.ಪಿ. ಮರಿಸ್ವಾಮಿ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>