<p><strong>ಬಿಡದಿ: </strong>‘ಹಾಲು ಒಕ್ಕೂಟದಿಂದ ದೊರೆಯುವ ಯೋಜನೆಗಳನ್ನು ಉತ್ಪಾದಕರು ಸದುಪಯೋಗಪಡಿಸಿಕೊಂಡು ಆರ್ಥಿಕ ಪ್ರಗತಿ ಸಾಧಿಸಬೇಕು’ ಎಂದು ಬಮೂಲ್ ನಿರ್ದೇಶಕ ಹರೀಶ್ ಹೇಳಿದರು.</p>.<p>ಶೇಷಗಿರಿಹಳ್ಳಿಯಲ್ಲಿ ಹಾಲು ಉತ್ಪಾದಕರ ಸಂಘದಿಂದ ನಡೆದ ₹ 8 ಲಕ್ಷ ವೆಚ್ಚದ 3,000 ಲೀಟರ್ ಸಾಮರ್ಥ್ಯವುಳ್ಳ ಹಾಲು ಶೇಖರಣಾ ಘಟಕದ ಹೆಚ್ಚುವರಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ನಿಸ್ವಾರ್ಥ ಹಾಗೂ ಪಕ್ಷಾತೀತವಾಗಿ ನಡೆಸಿಕೊಂಡು ಹೋದಾಗ ಸಂಸ್ಥೆಗಳು ಅಭಿವೃದ್ಧಿ ಕಾಣುತ್ತವೆ. ಇದಕ್ಕೆ ಶೇಷಗಿರಿಹಳ್ಳಿ ಹಾಲು ಉತ್ಪಾದಕರ ಸಂಘ ಉತ್ತಮ ಉದಾಹರಣೆ. ಈ ಸಂಘದಲ್ಲಿ ಕೇವಲ 60 ಸದಸ್ಯರು ಇದ್ದರೂ ಹೋಮ್ ಡೆಲಿವರಿ ನಿರ್ವಹಣೆ ಮೂಲಕ ಸದಸ್ಯರು ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಿ ಡೇರಿಗೆ ಸರಬರಾಜು ಮಾಡುತ್ತಿದ್ದಾರೆ. ರವಿಶಂಕರ್ ಎಂಬುವರು ಪ್ರತಿದಿನ ಹೆಚ್ಚು ಹಾಲು ಪೂರೈಕೆ ಮಾಡುತ್ತಿರುವುದು ಶ್ಲಾಘನೀಯ ಎಂದು<br />ಹೇಳಿದರು.</p>.<p>ಸಂಘದ ಅಧ್ಯಕ್ಷ ರಘು ಮಾತನಾಡಿ, ಸಂಘದ ಬೆಳವಣಿಗೆ ಹಾಗೂ ರೈತರ ಅಭಿವೃದ್ಧಿಯನ್ನು ಮುಖ್ಯ ಗುರಿಯಾಗಿಟ್ಟುಕೊಂಡು ಸಂಘವನ್ನು ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಆರ್. ಮಲ್ಲೇಶ್ ಮಾತನಾಡಿ, ಸಂಘವು ಪ್ರತಿದಿನ ಸುಮಾರು 2 ಸಾವಿರ ಲೀಟರ್ ಹಾಲು ಉತ್ಪಾದನೆ ಮಾಡುವ ಮೂಲಕ ಸುಸ್ಥಿತಿಯಲ್ಲಿದೆ. ಹೀಗಾಗಿ ಸಂಘಕ್ಕೆ ಮೂರು ಸಾವಿರ ಲೀಟರ್ ಸಾಮರ್ಥ್ಯದ ಶೇಖರಣ ಘಟಕದ ಅಗತ್ಯವಿದೆ. ಈಗ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಬೆಂಗಳೂರು ಒಕ್ಕೂಟದಿಂದ ₹ 2 ಲಕ್ಷ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ₹ 1.50 ಲಕ್ಷ ಅನುದಾನ ನೀಡಲಾಗುತ್ತಿದೆ. ಇದರ ಜೊತೆಗೆ ಸಂಘದಲ್ಲಿ ಉಳಿತಾಯ ಆಗಿರುವ ₹ 4.50 ಲಕ್ಷವನ್ನು ಕಟ್ಟಡ ನಿರ್ಮಾಣಕ್ಕಾಗಿ ಬಳಸಿಕೊಳ್ಳಲಾಗುವುದು ಎಂದು ವಿವರಿಸಿದರು.</p>.<p>ಸಂಘದ ನಿರ್ದೇಶಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಡದಿ: </strong>‘ಹಾಲು ಒಕ್ಕೂಟದಿಂದ ದೊರೆಯುವ ಯೋಜನೆಗಳನ್ನು ಉತ್ಪಾದಕರು ಸದುಪಯೋಗಪಡಿಸಿಕೊಂಡು ಆರ್ಥಿಕ ಪ್ರಗತಿ ಸಾಧಿಸಬೇಕು’ ಎಂದು ಬಮೂಲ್ ನಿರ್ದೇಶಕ ಹರೀಶ್ ಹೇಳಿದರು.</p>.<p>ಶೇಷಗಿರಿಹಳ್ಳಿಯಲ್ಲಿ ಹಾಲು ಉತ್ಪಾದಕರ ಸಂಘದಿಂದ ನಡೆದ ₹ 8 ಲಕ್ಷ ವೆಚ್ಚದ 3,000 ಲೀಟರ್ ಸಾಮರ್ಥ್ಯವುಳ್ಳ ಹಾಲು ಶೇಖರಣಾ ಘಟಕದ ಹೆಚ್ಚುವರಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ನಿಸ್ವಾರ್ಥ ಹಾಗೂ ಪಕ್ಷಾತೀತವಾಗಿ ನಡೆಸಿಕೊಂಡು ಹೋದಾಗ ಸಂಸ್ಥೆಗಳು ಅಭಿವೃದ್ಧಿ ಕಾಣುತ್ತವೆ. ಇದಕ್ಕೆ ಶೇಷಗಿರಿಹಳ್ಳಿ ಹಾಲು ಉತ್ಪಾದಕರ ಸಂಘ ಉತ್ತಮ ಉದಾಹರಣೆ. ಈ ಸಂಘದಲ್ಲಿ ಕೇವಲ 60 ಸದಸ್ಯರು ಇದ್ದರೂ ಹೋಮ್ ಡೆಲಿವರಿ ನಿರ್ವಹಣೆ ಮೂಲಕ ಸದಸ್ಯರು ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಿ ಡೇರಿಗೆ ಸರಬರಾಜು ಮಾಡುತ್ತಿದ್ದಾರೆ. ರವಿಶಂಕರ್ ಎಂಬುವರು ಪ್ರತಿದಿನ ಹೆಚ್ಚು ಹಾಲು ಪೂರೈಕೆ ಮಾಡುತ್ತಿರುವುದು ಶ್ಲಾಘನೀಯ ಎಂದು<br />ಹೇಳಿದರು.</p>.<p>ಸಂಘದ ಅಧ್ಯಕ್ಷ ರಘು ಮಾತನಾಡಿ, ಸಂಘದ ಬೆಳವಣಿಗೆ ಹಾಗೂ ರೈತರ ಅಭಿವೃದ್ಧಿಯನ್ನು ಮುಖ್ಯ ಗುರಿಯಾಗಿಟ್ಟುಕೊಂಡು ಸಂಘವನ್ನು ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಆರ್. ಮಲ್ಲೇಶ್ ಮಾತನಾಡಿ, ಸಂಘವು ಪ್ರತಿದಿನ ಸುಮಾರು 2 ಸಾವಿರ ಲೀಟರ್ ಹಾಲು ಉತ್ಪಾದನೆ ಮಾಡುವ ಮೂಲಕ ಸುಸ್ಥಿತಿಯಲ್ಲಿದೆ. ಹೀಗಾಗಿ ಸಂಘಕ್ಕೆ ಮೂರು ಸಾವಿರ ಲೀಟರ್ ಸಾಮರ್ಥ್ಯದ ಶೇಖರಣ ಘಟಕದ ಅಗತ್ಯವಿದೆ. ಈಗ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಬೆಂಗಳೂರು ಒಕ್ಕೂಟದಿಂದ ₹ 2 ಲಕ್ಷ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ₹ 1.50 ಲಕ್ಷ ಅನುದಾನ ನೀಡಲಾಗುತ್ತಿದೆ. ಇದರ ಜೊತೆಗೆ ಸಂಘದಲ್ಲಿ ಉಳಿತಾಯ ಆಗಿರುವ ₹ 4.50 ಲಕ್ಷವನ್ನು ಕಟ್ಟಡ ನಿರ್ಮಾಣಕ್ಕಾಗಿ ಬಳಸಿಕೊಳ್ಳಲಾಗುವುದು ಎಂದು ವಿವರಿಸಿದರು.</p>.<p>ಸಂಘದ ನಿರ್ದೇಶಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>