<p>ಬಿಡದಿ: ರೋಟರಿ ಸೆಂಟ್ರಲ್ ಹಾಗೂ ಜ್ಞಾನ ವಿಕಾಸ ವಿದ್ಯಾಸಂಸ್ಥೆಯ ಸಹಯೋಗದೊಂದಿಗೆ ಸೋಮವಾರ ರಕ್ತದಾನ ಶಿಬಿರ ನಡೆಯಿತು. ನಟ ಪುನೀತ್ ರಾಜಕುಮಾರ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಮೌನಾಚರಣೆ ಮಾಡಲಾಯಿತು.</p>.<p>ಶಿಬಿರ ಉದ್ಘಾಟಿಸಿದ ಜ್ಞಾನವಿಕಾಸ ವಿದ್ಯಾಸಂಸ್ಥೆಯ ಎಲ್. ಸತೀಶ್ಚಂದ್ರ ಮಾತನಾಡಿ, ವಿದ್ಯಾರ್ಥಿಗಳು ಸಮಾಜ ಸೇವೆ ಮಾಡುವ ಜೊತೆಗೆ ರಕ್ತದಾನ ಮಾಡಬೇಕು. ಇದಕ್ಕೆ ರೋಟರಿ ಸಂಸ್ಥೆಯು ಸಹಕಾರ ನೀಡಲಿದೆ ಎಂದು ತಿಳಿಸಿದರು.</p>.<p>ಅಧ್ಯಕ್ಷತೆವಹಿಸಿದ್ದ ಮುಖಂಡ ನಟರಾಜ್ ಮಾತನಾಡಿ, ವಿದ್ಯಾರ್ಥಿಗಳು ಸಮಾಜಕ್ಕೆ ಒಳ್ಳೆಯ ಕೆಲಸ ಮಾಡಲು ವಿದ್ಯಾರ್ಥಿ ಜೀವನದಲ್ಲಿ ಮುಂದಾಗಬೇಕು ಎಂದು ಸಲಹೆ ನೀಡಿದರು.</p>.<p>ವಿದ್ಯಾರ್ಥಿಗಳು ವರ್ಷಕ್ಕೆ ಎರಡು ಬಾರಿ ರಕ್ತದಾನ ಮಾಡಿದರೆ ನೊಂದ ಜೀವಗಳಿಗೆ ಆಸರೆಯಾಗಲಿದೆ. ರಕ್ತದ ಅವಶ್ಯಕತೆ ಇರುವ ರೋಗಿಗಳಿಗೆ ಅನುಕೂಲವಾಗುತ್ತದೆ. ರಕ್ತದಾನ ಮಾಡಿದರೆ ಆರೋಗ್ಯಕ್ಕೆ ಯಾವುದೇ ರೀತಿಯ ಹಾನಿಯಾಗುವುದಿಲ್ಲ ಎಂದು<br />ಹೇಳಿದರು.</p>.<p>ರೋಟರಿ ಅಧ್ಯಕ್ಷ ವಸಂತಕುಮಾರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಮಲ್ಲೇಶ್, ರೋಟೆರಿಯನ್ ಆನಂದ್, ರಮೇಶ್, ಶಿವಣ್ಣ, ಲೋಕೇಶ್, ಶಂಕರಣ್ಣ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಿ. ರೂಪಾ ಹಾಗೂ ಉಪನ್ಯಾಸಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಿಡದಿ: ರೋಟರಿ ಸೆಂಟ್ರಲ್ ಹಾಗೂ ಜ್ಞಾನ ವಿಕಾಸ ವಿದ್ಯಾಸಂಸ್ಥೆಯ ಸಹಯೋಗದೊಂದಿಗೆ ಸೋಮವಾರ ರಕ್ತದಾನ ಶಿಬಿರ ನಡೆಯಿತು. ನಟ ಪುನೀತ್ ರಾಜಕುಮಾರ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಮೌನಾಚರಣೆ ಮಾಡಲಾಯಿತು.</p>.<p>ಶಿಬಿರ ಉದ್ಘಾಟಿಸಿದ ಜ್ಞಾನವಿಕಾಸ ವಿದ್ಯಾಸಂಸ್ಥೆಯ ಎಲ್. ಸತೀಶ್ಚಂದ್ರ ಮಾತನಾಡಿ, ವಿದ್ಯಾರ್ಥಿಗಳು ಸಮಾಜ ಸೇವೆ ಮಾಡುವ ಜೊತೆಗೆ ರಕ್ತದಾನ ಮಾಡಬೇಕು. ಇದಕ್ಕೆ ರೋಟರಿ ಸಂಸ್ಥೆಯು ಸಹಕಾರ ನೀಡಲಿದೆ ಎಂದು ತಿಳಿಸಿದರು.</p>.<p>ಅಧ್ಯಕ್ಷತೆವಹಿಸಿದ್ದ ಮುಖಂಡ ನಟರಾಜ್ ಮಾತನಾಡಿ, ವಿದ್ಯಾರ್ಥಿಗಳು ಸಮಾಜಕ್ಕೆ ಒಳ್ಳೆಯ ಕೆಲಸ ಮಾಡಲು ವಿದ್ಯಾರ್ಥಿ ಜೀವನದಲ್ಲಿ ಮುಂದಾಗಬೇಕು ಎಂದು ಸಲಹೆ ನೀಡಿದರು.</p>.<p>ವಿದ್ಯಾರ್ಥಿಗಳು ವರ್ಷಕ್ಕೆ ಎರಡು ಬಾರಿ ರಕ್ತದಾನ ಮಾಡಿದರೆ ನೊಂದ ಜೀವಗಳಿಗೆ ಆಸರೆಯಾಗಲಿದೆ. ರಕ್ತದ ಅವಶ್ಯಕತೆ ಇರುವ ರೋಗಿಗಳಿಗೆ ಅನುಕೂಲವಾಗುತ್ತದೆ. ರಕ್ತದಾನ ಮಾಡಿದರೆ ಆರೋಗ್ಯಕ್ಕೆ ಯಾವುದೇ ರೀತಿಯ ಹಾನಿಯಾಗುವುದಿಲ್ಲ ಎಂದು<br />ಹೇಳಿದರು.</p>.<p>ರೋಟರಿ ಅಧ್ಯಕ್ಷ ವಸಂತಕುಮಾರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಮಲ್ಲೇಶ್, ರೋಟೆರಿಯನ್ ಆನಂದ್, ರಮೇಶ್, ಶಿವಣ್ಣ, ಲೋಕೇಶ್, ಶಂಕರಣ್ಣ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಿ. ರೂಪಾ ಹಾಗೂ ಉಪನ್ಯಾಸಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>