ಕೊರೊನಾ ಸೋಂಕು ಕಣ್ಣಿಗೆ ಕಾಣದಿದ್ದರೂ ಅದರ ಪರಿಣಾಮ ಮಾತ್ರ ಭೀಕರವಾಗಿದೆ. ಸೋಂಕಿಗೆ ಸಾಕಷ್ಟು ಜನ ಬಲಿಯಾಗಿದ್ದಾರೆ. ಲಕ್ಷಾಂತರ ಜನ ಸೋಂಕಿನಿಂದ ನಲುಗಿ ಹೋಗಿದ್ದಾರೆ. ಇದರಿಂದ ಆರ್ಥಿಕ ವ್ಯವಸ್ಥೆಯೇ ಬುಡಮೇಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕಷ್ಟದಲ್ಲಿರುವ ಜನಕ್ಕೆ ಮಾಡುವ ಒಂದು ಸಣ್ಣ ಸಹಾಯವೂ ಅವರಿಗೆ ದೊಡ್ಡದಾಗಿರುತ್ತದೆ. ದಯಮಾಡಿ ಎಲ್ಲರೂ ತಮ್ಮ ಕೈಲಾದ ಮಟ್ಟಿಗೆ ಸಹಾಯ ಮಾಡಬೇಕು ಎಂದು ಮನವಿ ಮಾಡಿದರು.