ಜನರ ಕೂಗಾಟ ಹೆಚ್ಚಾದ ಬಳಿಕ ವೈದ್ಯರು ರೇಣುಕಪ್ಪ ಅವರನ್ನು ತಪಾಸಣೆಗೆ ಒಳಪಡಿಸಿದ್ದು, ಅವರು ಈಗಾಗಲೇ ಮೃತಪಟ್ಟಿರುವು
ದಾಗಿ ಘೋಷಿಸಿದರು. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆ ಸಿಬ್ಬಂದಿ ಶವಾಗಾರಕ್ಕೆ ಸಾಗಿಸಿದರು. ವೈದ್ಯರು ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದ ಕಾರಣದಿಂದಲೇ ರೋಗಿ ಮೃತಪಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸಂಬಂಧಿಕರು, ಶವವನ್ನು ಜಿಲ್ಲಾಸ್ಪತ್ರೆ ಮುಂಭಾಗಕ್ಕೆ ತಂದು ಪ್ರತಿಭಟನೆ ನಡೆಸಿದರು.