‘ಚನ್ನಪಟ್ಟಣ ಕಾಂಗ್ರೆಸ್ನಲ್ಲಿ ಗುಂಪುಗಾರಿಕೆ ಇದೆ. ಅವರು ಕೇವಲ ತಾವು ಬೆಳೆಯಬೇಕು ಎನ್ನುವ ಉದ್ದೇಶದಿಂದ ಇತರರನ್ನು ಬೆಳೆಯಲು ಬಿಡುವುದಿಲ್ಲ. ಹಲವು ಬಾರಿ ಈ ಬಗ್ಗೆ ನಾಯಕರ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿಲ್ಲ. ಪ್ರಮುಖವಾಗಿ ಪಕ್ಷದಲ್ಲಿ ದಲಿತ ನಾಯಕರು, ಮುಖಂಡರಿಗೆ, ಕಾರ್ಯಕರ್ತರಿಗೆ ಬೆಲೆಯಿಲ್ಲ. ಹಾಗಾಗಿ, ನಾನು ಮತ್ತು ಪಕ್ಷದ ಕೆಲವು ದಲಿತ ಮುಖಂಡರು ಕಾಂಗ್ರೆಸ್ ತೊರೆಯಲು ನಿರ್ಧರಿಸಿದ್ದೇವೆ’ ಎಂದು ತಿಳಿಸಿದರು.