<p><strong>ಹಾರೋಹಳ್ಳಿ</strong>: ಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ. ಅವರೊಬ್ಬ ಜ್ಞಾನದ ಸಂಕೇತ. ವಿಶ್ವ ಜ್ಞಾನಿ, ಸರ್ವರ ಏಳಿಗೆ ಸೂರ್ಯ ಎಂದು ಡಾ.ಹೇಮಾ ನಾಯ್ಕ ಅಭಿಪ್ರಾಯಪಟ್ಟರು.</p>.<p>ಹಾರೋಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಡಾ.ಅಂಬೇಡ್ಕರ್ ಅಧ್ಯಯನ ಕೇಂದ್ರದ ವತಿಯಿಂದ ನಡೆದ ಪರಿನಿರ್ವಾಣ ದಿನದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜದ ಕಟ್ಟಕಡೆ ವ್ಯಕ್ತಿಗೆ ಯಾವುದೇ ರೀತಿಯಲ್ಲಿ ತಾರತಮ್ಯ ಆಗದ ರೀತಿಯಲ್ಲಿ ಹೋರಾಟ ನಡೆಸಿದ ಮಹಾನ್ ಹೋರಾಟಗಾರ ಎಂದರು.</p>.<p>ಸಮಾಜದ ಜಾತಿ ತಾರತಮ್ಯ, ಅಸಮಾನತೆ ವಿರುದ್ಧ ಹೋರಾಡಿದ ಮಹಾನ್ ಮಾನವತಾವಾದಿ. ಮಹಿಳೆಯರಿಗೆ ಸ್ವಾಭಿಮಾನದ ಬದುಕು, ಮತದಾನ, ಶಿಕ್ಷಣದ ಹಕ್ಕು ನೀಡಿದ ಸುಧಾರಕ ಎಂದರು.</p>.<p>ಡಾ.ನಾಗಭೂಷಣ್, ಸಂವಿಧಾನದಲ್ಲಿ ಬಡವರು, ಮಹಿಳೆಯರು, ಅಲ್ಪಸಂಖ್ಯಾತರ ಕಲ್ಯಾಣ ದೃಷ್ಟಿಯಿಂದ ಹಲವು ಯೋಜನೆಗಳನ್ನು ಜಾರಿಗೆ ತಂದ ಸಮಾಜ ವಿಜ್ಞಾನಿ ಎಂದು ಬಣ್ಣಿಸಿದರು.</p>.<p>ಪ್ರೊ.ರಮೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾ.ಅನಿತಾ, ಡಾ.ನಿರೂಪ, ಡಾ.ಲಕ್ಷ್ಮಮ್ಮ, ಡಾ.ವೆಂಕಟೇಶ್, ಡಾ.ವೆ.ಪೂಜಾರ್ ಇದ್ದರು. ಕೃಷ್ಣ ನಾಯಕ್ ಹೋರಾಟದ ಗೀತೆಗಳನ್ನು ಹಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ</strong>: ಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ. ಅವರೊಬ್ಬ ಜ್ಞಾನದ ಸಂಕೇತ. ವಿಶ್ವ ಜ್ಞಾನಿ, ಸರ್ವರ ಏಳಿಗೆ ಸೂರ್ಯ ಎಂದು ಡಾ.ಹೇಮಾ ನಾಯ್ಕ ಅಭಿಪ್ರಾಯಪಟ್ಟರು.</p>.<p>ಹಾರೋಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಡಾ.ಅಂಬೇಡ್ಕರ್ ಅಧ್ಯಯನ ಕೇಂದ್ರದ ವತಿಯಿಂದ ನಡೆದ ಪರಿನಿರ್ವಾಣ ದಿನದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜದ ಕಟ್ಟಕಡೆ ವ್ಯಕ್ತಿಗೆ ಯಾವುದೇ ರೀತಿಯಲ್ಲಿ ತಾರತಮ್ಯ ಆಗದ ರೀತಿಯಲ್ಲಿ ಹೋರಾಟ ನಡೆಸಿದ ಮಹಾನ್ ಹೋರಾಟಗಾರ ಎಂದರು.</p>.<p>ಸಮಾಜದ ಜಾತಿ ತಾರತಮ್ಯ, ಅಸಮಾನತೆ ವಿರುದ್ಧ ಹೋರಾಡಿದ ಮಹಾನ್ ಮಾನವತಾವಾದಿ. ಮಹಿಳೆಯರಿಗೆ ಸ್ವಾಭಿಮಾನದ ಬದುಕು, ಮತದಾನ, ಶಿಕ್ಷಣದ ಹಕ್ಕು ನೀಡಿದ ಸುಧಾರಕ ಎಂದರು.</p>.<p>ಡಾ.ನಾಗಭೂಷಣ್, ಸಂವಿಧಾನದಲ್ಲಿ ಬಡವರು, ಮಹಿಳೆಯರು, ಅಲ್ಪಸಂಖ್ಯಾತರ ಕಲ್ಯಾಣ ದೃಷ್ಟಿಯಿಂದ ಹಲವು ಯೋಜನೆಗಳನ್ನು ಜಾರಿಗೆ ತಂದ ಸಮಾಜ ವಿಜ್ಞಾನಿ ಎಂದು ಬಣ್ಣಿಸಿದರು.</p>.<p>ಪ್ರೊ.ರಮೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾ.ಅನಿತಾ, ಡಾ.ನಿರೂಪ, ಡಾ.ಲಕ್ಷ್ಮಮ್ಮ, ಡಾ.ವೆಂಕಟೇಶ್, ಡಾ.ವೆ.ಪೂಜಾರ್ ಇದ್ದರು. ಕೃಷ್ಣ ನಾಯಕ್ ಹೋರಾಟದ ಗೀತೆಗಳನ್ನು ಹಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>