<p><strong>ಚನ್ನಪಟ್ಟಣ</strong>: ಸಮ ಸಮಾಜದ ನಿರ್ಮಾಣಕ್ಕೆ ಸಮರೋಪಾದಿಯಲ್ಲಿ ಹೋರಾಟ ಕೈಗೊಂಡು, ಭಾರತೀಯರ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ಅನುಕರಣೀಯ ಎಂದು ಸಾಹಿತಿ ವಿಜಯ್ ರಾಂಪುರ ತಿಳಿಸಿದರು.</p>.<p>ಪಟ್ಟಣದ ಮಹಾಲಕ್ಷ್ಮಿ ಬಡಾವಣೆಯಲ್ಲಿ ರಾಂಪುರದ ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಬುಧವಾರ ಏರ್ಪಡಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.</p>.<p>ಅಂಬೇಡ್ಕರ್ ಅವರ ಶೋಷಿತರ ಪರವಾದ ನಿಲುವು, ಮಹಿಳಾ ಸಬಲೀಕರಣದ ತುಡಿತ, ಮಾನವೀಯ ಮೌಲ್ಯ, ಆರ್ಥಿಕ ಮತ್ತು ಸಾಮಾಜಿಕ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ. ತನ್ನ ಇಡೀ ಬದುಕನ್ನು ಸಮಾಜಕ್ಕೆ ಮೀಸಲಿರಿಸಿದ ಈ ಯುಗಪುರುಷನ ಆಶಯಗಳನ್ನು ಪೋಷಿಸಿಕೊಂಡು ಹೋಗಬೇಕಾದ ಜವಾಬ್ದಾರಿ ಸಮಾಜದ ಮೇಲಿದೆ ಎಂದರು.</p>.<p>ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಉಪ ವ್ಯವಸ್ಥಾಪಕ ಶ್ರೀಹರ್ಷ ಕುಲಕರ್ಣಿ ಮಾತನಾಡಿ, ವಿಶ್ವ ಶ್ರೇಷ್ಠ ಅಂಬೇಡ್ಕರ್ ಅವರ ಕ್ರಿಯಾಶೀಲತೆ, ಹೋರಾಟದ ಮನೋಭಾವ, ಬದ್ಧತೆ, ಪ್ರಾಮಾಣಿಕತೆ ಮತ್ತು ಆದರ್ಶಗಳನ್ನು ಮೈಗೂಡಿಸಿಕೊಂಡು ಹೋಗಬೇಕು ಎಂದು ಹೇಳಿದರು.</p>.<p>ಜನಪದ ಗಾಯಕ ಚೌ.ಪು. ಸ್ವಾಮಿ, ಮುಖಂಡ ಟಿ. ಅಪ್ಪಾಜಿ, ಗಾಯಕರಾದ ಎಂ.ಆರ್. ಸುಶೀಲಮ್ಮ, ಎಂ.ಎ. ತುಳಸೀಧರ, ಸುದರ್ಶನ್ ಹಾಜರಿದ್ದರು. ಕ್ರಾಂತಿ ಗೀತೆಗಳನ್ನುಹಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ಸಮ ಸಮಾಜದ ನಿರ್ಮಾಣಕ್ಕೆ ಸಮರೋಪಾದಿಯಲ್ಲಿ ಹೋರಾಟ ಕೈಗೊಂಡು, ಭಾರತೀಯರ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ಅನುಕರಣೀಯ ಎಂದು ಸಾಹಿತಿ ವಿಜಯ್ ರಾಂಪುರ ತಿಳಿಸಿದರು.</p>.<p>ಪಟ್ಟಣದ ಮಹಾಲಕ್ಷ್ಮಿ ಬಡಾವಣೆಯಲ್ಲಿ ರಾಂಪುರದ ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಬುಧವಾರ ಏರ್ಪಡಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.</p>.<p>ಅಂಬೇಡ್ಕರ್ ಅವರ ಶೋಷಿತರ ಪರವಾದ ನಿಲುವು, ಮಹಿಳಾ ಸಬಲೀಕರಣದ ತುಡಿತ, ಮಾನವೀಯ ಮೌಲ್ಯ, ಆರ್ಥಿಕ ಮತ್ತು ಸಾಮಾಜಿಕ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ. ತನ್ನ ಇಡೀ ಬದುಕನ್ನು ಸಮಾಜಕ್ಕೆ ಮೀಸಲಿರಿಸಿದ ಈ ಯುಗಪುರುಷನ ಆಶಯಗಳನ್ನು ಪೋಷಿಸಿಕೊಂಡು ಹೋಗಬೇಕಾದ ಜವಾಬ್ದಾರಿ ಸಮಾಜದ ಮೇಲಿದೆ ಎಂದರು.</p>.<p>ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಉಪ ವ್ಯವಸ್ಥಾಪಕ ಶ್ರೀಹರ್ಷ ಕುಲಕರ್ಣಿ ಮಾತನಾಡಿ, ವಿಶ್ವ ಶ್ರೇಷ್ಠ ಅಂಬೇಡ್ಕರ್ ಅವರ ಕ್ರಿಯಾಶೀಲತೆ, ಹೋರಾಟದ ಮನೋಭಾವ, ಬದ್ಧತೆ, ಪ್ರಾಮಾಣಿಕತೆ ಮತ್ತು ಆದರ್ಶಗಳನ್ನು ಮೈಗೂಡಿಸಿಕೊಂಡು ಹೋಗಬೇಕು ಎಂದು ಹೇಳಿದರು.</p>.<p>ಜನಪದ ಗಾಯಕ ಚೌ.ಪು. ಸ್ವಾಮಿ, ಮುಖಂಡ ಟಿ. ಅಪ್ಪಾಜಿ, ಗಾಯಕರಾದ ಎಂ.ಆರ್. ಸುಶೀಲಮ್ಮ, ಎಂ.ಎ. ತುಳಸೀಧರ, ಸುದರ್ಶನ್ ಹಾಜರಿದ್ದರು. ಕ್ರಾಂತಿ ಗೀತೆಗಳನ್ನುಹಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>