<p><strong>ಚನ್ನಪಟ್ಟಣ</strong>: ‘ಅಂಬೇಡ್ಕರ್ ಅವರು ಸಂವಿಧಾನದ ಮುಖಾಂತರ ಪ್ರತಿಯೊಂದು ಸಮುದಾಯಕ್ಕೂ ನ್ಯಾಯ ಒದಗಿಸಿದ ಮಹಾನ್ ನಾಯಕ’ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ರಾಮಚಂದ್ರು ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಜೆ. ಬ್ಯಾಡರಹಳ್ಳಿಯಲ್ಲಿ ಬಿಜೆಪಿ ಘಟಕದಿಂದ ಬುಧವಾರ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.</p>.<p>ಪ್ರಪಂಚವೇ ಶ್ಲಾಘಿಸುವ ಸಂವಿಧಾನವಿದ್ದರೆ ಅದು ಅಂಬೇಡ್ಕರ್ ಅವರು ರಚಿಸಿರುವ ಭಾರತದ ಸಂವಿಧಾನ. ಸಂವಿಧಾನದಲ್ಲಿ ಪ್ರತಿಯೊಂದು ಸಮು ದಾಯಕ್ಕೂ ಮೀಸಲಾತಿ ಕಲ್ಪಿಸಲಾಗಿದೆ. ಅಂಬೇಡ್ಕರ್ ಅವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ದೇಶಕ್ಕೆ ಮಹತ್ತರವಾದ ಕೊಡುಗೆ ನೀಡಲು ಮುಂದಾಗಬೇಕು ಎಂದರು.</p>.<p>ಕೋಡಂಬಹಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೆ.ಎಸ್. ನಾಗರಾಜು ಮಾತನಾಡಿ, ಅಂಬೇಡ್ಕರ್ ಆಶಯಗಳು ಈಡೇರುತ್ತಿಲ್ಲ. ಸಂವಿಧಾನದಲ್ಲಿರುವ ಮೂಲ ಆಶಯಗಳನ್ನು ಜಾರಿಗೆ ತರಲು ಸರ್ಕಾರಗಳು ಮುಂದಾಗಬೇಕು. ಅಂಬೇಡ್ಕರ್ ಅವರು ಒಂದು ಸಮುದಾಯಕ್ಕೆ ಸೀಮಿತವಲ್ಲ. ಅವರು ಸರ್ವ ಸಮುದಾಯದ ನಾಯಕ ಎಂದರು.</p>.<p>ಬಿಜೆಪಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಮಂಗಾಡಹಳ್ಳಿ ಜೈಪ್ರಕಾಶ್, ಮಾಳಗಾಳು ರಾಮು, ದೊಡ್ಡರಾಜು, ಬಸವರಾಜು, ಕೃಷ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ‘ಅಂಬೇಡ್ಕರ್ ಅವರು ಸಂವಿಧಾನದ ಮುಖಾಂತರ ಪ್ರತಿಯೊಂದು ಸಮುದಾಯಕ್ಕೂ ನ್ಯಾಯ ಒದಗಿಸಿದ ಮಹಾನ್ ನಾಯಕ’ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ರಾಮಚಂದ್ರು ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಜೆ. ಬ್ಯಾಡರಹಳ್ಳಿಯಲ್ಲಿ ಬಿಜೆಪಿ ಘಟಕದಿಂದ ಬುಧವಾರ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.</p>.<p>ಪ್ರಪಂಚವೇ ಶ್ಲಾಘಿಸುವ ಸಂವಿಧಾನವಿದ್ದರೆ ಅದು ಅಂಬೇಡ್ಕರ್ ಅವರು ರಚಿಸಿರುವ ಭಾರತದ ಸಂವಿಧಾನ. ಸಂವಿಧಾನದಲ್ಲಿ ಪ್ರತಿಯೊಂದು ಸಮು ದಾಯಕ್ಕೂ ಮೀಸಲಾತಿ ಕಲ್ಪಿಸಲಾಗಿದೆ. ಅಂಬೇಡ್ಕರ್ ಅವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ದೇಶಕ್ಕೆ ಮಹತ್ತರವಾದ ಕೊಡುಗೆ ನೀಡಲು ಮುಂದಾಗಬೇಕು ಎಂದರು.</p>.<p>ಕೋಡಂಬಹಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೆ.ಎಸ್. ನಾಗರಾಜು ಮಾತನಾಡಿ, ಅಂಬೇಡ್ಕರ್ ಆಶಯಗಳು ಈಡೇರುತ್ತಿಲ್ಲ. ಸಂವಿಧಾನದಲ್ಲಿರುವ ಮೂಲ ಆಶಯಗಳನ್ನು ಜಾರಿಗೆ ತರಲು ಸರ್ಕಾರಗಳು ಮುಂದಾಗಬೇಕು. ಅಂಬೇಡ್ಕರ್ ಅವರು ಒಂದು ಸಮುದಾಯಕ್ಕೆ ಸೀಮಿತವಲ್ಲ. ಅವರು ಸರ್ವ ಸಮುದಾಯದ ನಾಯಕ ಎಂದರು.</p>.<p>ಬಿಜೆಪಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಮಂಗಾಡಹಳ್ಳಿ ಜೈಪ್ರಕಾಶ್, ಮಾಳಗಾಳು ರಾಮು, ದೊಡ್ಡರಾಜು, ಬಸವರಾಜು, ಕೃಷ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>