<p><strong>ಮಾಗಡಿ</strong>: ಪಟ್ಟಣದ ಸಮೃದ್ಧಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.</p>.<p>ಈ ವೇಳೆ ಶಿಕ್ಷಕ ಡಿ.ಜಿ.ಗಂಗಾಧರ್ ಮಾತನಾಡಿ, ಬಾಬಾ ಸಾಹೇಬರು ಮಹಾನ್ ವ್ಯಕ್ತಿಯಾಗಿದ್ದು, ಅವರ ಚಿಂತನೆಗಳು ಇಂದಿಗೂ ಎಲ್ಲರಿಗೂ ಸ್ಫೂರ್ತಿದಾಯಕವಾದವು. ಸಂವಿಧಾನದ ರಚನಕಾರರಾದ ಅಂಬೇಡ್ಕರ್ ಅವರು ಜಾತಿ ವ್ಯವಸ್ಥೆಯನ್ನು ವಿರೋಧಿಸುತ್ತಲೇ ಅದನ್ನು ಸಮಾಜದಿಂದ ನಿರ್ಮೂಲನೆ ಮಾಡಲು ಪ್ರಯತ್ನಿಸಿದರು ಎಂದರು.</p>.<p>ಅಂಬೇಡ್ಕರ್ ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತ. ಅವರ ತತ್ವ ಆದರ್ಶಗಳು ಸುಂದರ ಸಮಾಜ ನಿರ್ಮಿಸುವಂತಹದ್ದು. ಸಂವಿಧಾನ ಪ್ರತಿಯೊಬ್ಬ ಭಾರತೀಯರ ಪಾಲಿನ ಪವಿತ್ರ ಗ್ರಂಥವಾಗಿದೆ ಎಂದು ತಿಳಿಸಿದರು.</p>.<p>ಸಂಸ್ಥೆಯ ಅಧ್ಯಕ್ಷ ಡಿ.ಸಿ.ರಾಮಚಂದ್ರ ಮಾತನಾಡಿ, ಅಂಬೇಡ್ಕರ್ ಅವರಂತೆ ಎಲ್ಲಾ ವಿದ್ಯಾರ್ಥಿಗಳು ಪುಸ್ತಕ ಪ್ರಿಯರಾಗಿ ಓದುವ ಹವ್ಯಾಸವನ್ನು ಮೈಗೂಡಿಸಿಕೊಳ್ಳಿ ಎಂದು ವಿದ್ಯಾರ್ಥಿ ಸಮುದಾಯಕ್ಕೆ ಕರೆ ನೀಡಿದರು.<br><br>ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಸಿ.ಜಿ.ಚಂದನ್ ಅವರನ್ನು ಸಮೃದ್ಧಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವತಿಯಿಂದ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.</p>.<p>ಈ ವೇಳೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆಯ ತಾಲ್ಲೂಕು ಕಾರ್ಯದರ್ಶಿ ಎನ್.ಮುನಿಯಪ್ಪ, ಶಿಕ್ಷಕ ಆರ್. ನರಸಿಂಹಮೂರ್ತಿ, ಸಂಸ್ಥೆಯ ಸಿಬ್ಬಂದಿಗಳಾದ ಲೀಲಾವತಿ, ನಾರಾಯಣ್ ಗಿರೀಶ್ ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ಪಟ್ಟಣದ ಸಮೃದ್ಧಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.</p>.<p>ಈ ವೇಳೆ ಶಿಕ್ಷಕ ಡಿ.ಜಿ.ಗಂಗಾಧರ್ ಮಾತನಾಡಿ, ಬಾಬಾ ಸಾಹೇಬರು ಮಹಾನ್ ವ್ಯಕ್ತಿಯಾಗಿದ್ದು, ಅವರ ಚಿಂತನೆಗಳು ಇಂದಿಗೂ ಎಲ್ಲರಿಗೂ ಸ್ಫೂರ್ತಿದಾಯಕವಾದವು. ಸಂವಿಧಾನದ ರಚನಕಾರರಾದ ಅಂಬೇಡ್ಕರ್ ಅವರು ಜಾತಿ ವ್ಯವಸ್ಥೆಯನ್ನು ವಿರೋಧಿಸುತ್ತಲೇ ಅದನ್ನು ಸಮಾಜದಿಂದ ನಿರ್ಮೂಲನೆ ಮಾಡಲು ಪ್ರಯತ್ನಿಸಿದರು ಎಂದರು.</p>.<p>ಅಂಬೇಡ್ಕರ್ ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತ. ಅವರ ತತ್ವ ಆದರ್ಶಗಳು ಸುಂದರ ಸಮಾಜ ನಿರ್ಮಿಸುವಂತಹದ್ದು. ಸಂವಿಧಾನ ಪ್ರತಿಯೊಬ್ಬ ಭಾರತೀಯರ ಪಾಲಿನ ಪವಿತ್ರ ಗ್ರಂಥವಾಗಿದೆ ಎಂದು ತಿಳಿಸಿದರು.</p>.<p>ಸಂಸ್ಥೆಯ ಅಧ್ಯಕ್ಷ ಡಿ.ಸಿ.ರಾಮಚಂದ್ರ ಮಾತನಾಡಿ, ಅಂಬೇಡ್ಕರ್ ಅವರಂತೆ ಎಲ್ಲಾ ವಿದ್ಯಾರ್ಥಿಗಳು ಪುಸ್ತಕ ಪ್ರಿಯರಾಗಿ ಓದುವ ಹವ್ಯಾಸವನ್ನು ಮೈಗೂಡಿಸಿಕೊಳ್ಳಿ ಎಂದು ವಿದ್ಯಾರ್ಥಿ ಸಮುದಾಯಕ್ಕೆ ಕರೆ ನೀಡಿದರು.<br><br>ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಸಿ.ಜಿ.ಚಂದನ್ ಅವರನ್ನು ಸಮೃದ್ಧಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವತಿಯಿಂದ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.</p>.<p>ಈ ವೇಳೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆಯ ತಾಲ್ಲೂಕು ಕಾರ್ಯದರ್ಶಿ ಎನ್.ಮುನಿಯಪ್ಪ, ಶಿಕ್ಷಕ ಆರ್. ನರಸಿಂಹಮೂರ್ತಿ, ಸಂಸ್ಥೆಯ ಸಿಬ್ಬಂದಿಗಳಾದ ಲೀಲಾವತಿ, ನಾರಾಯಣ್ ಗಿರೀಶ್ ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>