<p><strong>ಕನಕಪುರ:</strong> ತಾಲ್ಲೂಕು ಕಚೇರಿ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಕಾರ್ಯ ಶೀಘ್ರ ಆಗಬೇಕೆಂದು ತಾಲ್ಲೂಕು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಜೆ.ಎಂ.ಶಿವಲಿಂಗಯ್ಯ ಒತ್ತಾಯಿಸಿದರು.</p>.<p>ತಾಲ್ಲೂಕು ದಲಿತ ಸಂಘಟನೆಗಳ ಒಕ್ಕೂಟದ ನಿಯೋಗದೊಂದಿಗೆ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಅಂಬೇಡ್ಕರ್ ಪುತ್ಥಳಿ ಸ್ಥಾಪಿಸುವ ವಿಚಾರವಾಗಿ ಬಹಳ ದಿನಗಳ ಹಿಂದೆಯೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಸೂಕ್ತ ಸ್ಥಳ ಗುರುತಿಸಿ ತಿಳಿಸುವಂತೆ ಅವರು ಸೂಚಿಸಿದ್ದರು ಎಂದರು.</p>.<p>ಒಕ್ಕೂಟದ ಎಂ.ಮಲ್ಲಿಕಾರ್ಜುನ್ ಮಾತನಾಡಿ, ಇಡೀ ವಿಶ್ವವೇ ಗೌರವಿಸುವ ಮಹಾನ್ ಚೇತನ ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಕಾರ್ಯ ತಕ್ಷಣದಿಂದ ಪ್ರಾರಂಭವಾಗಬೇಕು ಎಂದು ಆಗ್ರಹಿಸಿದರು.</p>.<p>ಒಕ್ಕೂಟದ ಮುಖಂಡರಾದ ಕೋಡಿಹಳ್ಳಿ ಚಿಕ್ಕಸ್ವಾಮಿ, ಛಲವಾದಿ ನವೀನ್, ಮಳಗಾಳು ಶಿವಶಂಕರ್, ತಾಮ ಮಲ್ಲೇಶ್, ನಟರಾಜು, ಸ್ವಾಮಿ, ಬೊಮ್ಮನಹಳ್ಳಿ ಸುರೇಶ್, ಮುತ್ತುರಾಜ್, ವೀರಭದ್ರಯ್ಯ, ಕುರುಪೇಟೆ ನಟ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ತಾಲ್ಲೂಕು ಕಚೇರಿ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಕಾರ್ಯ ಶೀಘ್ರ ಆಗಬೇಕೆಂದು ತಾಲ್ಲೂಕು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಜೆ.ಎಂ.ಶಿವಲಿಂಗಯ್ಯ ಒತ್ತಾಯಿಸಿದರು.</p>.<p>ತಾಲ್ಲೂಕು ದಲಿತ ಸಂಘಟನೆಗಳ ಒಕ್ಕೂಟದ ನಿಯೋಗದೊಂದಿಗೆ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಅಂಬೇಡ್ಕರ್ ಪುತ್ಥಳಿ ಸ್ಥಾಪಿಸುವ ವಿಚಾರವಾಗಿ ಬಹಳ ದಿನಗಳ ಹಿಂದೆಯೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಸೂಕ್ತ ಸ್ಥಳ ಗುರುತಿಸಿ ತಿಳಿಸುವಂತೆ ಅವರು ಸೂಚಿಸಿದ್ದರು ಎಂದರು.</p>.<p>ಒಕ್ಕೂಟದ ಎಂ.ಮಲ್ಲಿಕಾರ್ಜುನ್ ಮಾತನಾಡಿ, ಇಡೀ ವಿಶ್ವವೇ ಗೌರವಿಸುವ ಮಹಾನ್ ಚೇತನ ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಕಾರ್ಯ ತಕ್ಷಣದಿಂದ ಪ್ರಾರಂಭವಾಗಬೇಕು ಎಂದು ಆಗ್ರಹಿಸಿದರು.</p>.<p>ಒಕ್ಕೂಟದ ಮುಖಂಡರಾದ ಕೋಡಿಹಳ್ಳಿ ಚಿಕ್ಕಸ್ವಾಮಿ, ಛಲವಾದಿ ನವೀನ್, ಮಳಗಾಳು ಶಿವಶಂಕರ್, ತಾಮ ಮಲ್ಲೇಶ್, ನಟರಾಜು, ಸ್ವಾಮಿ, ಬೊಮ್ಮನಹಳ್ಳಿ ಸುರೇಶ್, ಮುತ್ತುರಾಜ್, ವೀರಭದ್ರಯ್ಯ, ಕುರುಪೇಟೆ ನಟ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>