<p><strong>ರಾಮನಗರ</strong>: ನಗರದಲ್ಲಿರುವ ಜಿಲ್ಲಾ ಆಸ್ಪತ್ರೆಗೆ ಶಾರದಾ ಚಾರಿಟೇಬಲ್ ಟ್ರಸ್ಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯಲ್ಲಿ(ಸಿಎಸ್ಆರ್ ಫಂಡ್) ನೀಡಿರುವ ಅತ್ಯಾಧುನಿಕ ಆಂಬ್ಯುಲೆನ್ಸ್ ಅನ್ನು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ಅವರು ಜಿಲ್ಲಾಸ್ಪತ್ರೆಗೆ ಇತ್ತೀಚೆಗೆ ಹಸ್ತಾಂತರಿಸಿದರು.</p>.<p>‘ಸಿಎಸ್ಆರ್ ಅನುದಾನದಲ್ಲಿ ರಾಮನಗರ ಜಿಲ್ಲಾಸ್ಪತ್ರೆಗೆ ಒಂದು ಆಂಬುಲೆನ್ಸ್ ಕೊಡುಗೆಯಾಗಿ ನೀಡುವಂತೆ ಟ್ರಸ್ಟ್ಗೆ ಮನವಿ ಮಾಡಿದ್ದೆ. ಅದಕ್ಕೆ ಟ್ರಸ್ಟ್ ಸ್ಪಂದಿಸಿದೆ. ಈ ಆಂಬುಲೆನ್ಸ್ ತುರ್ತು ಸಂದರ್ಭದಲ್ಲಿ ರೋಗಿಗಳಿಗೆ ತ್ವರಿತ ಹಾಗೂ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಸಹಾಯವಾಗಲಿದೆ’ ಎಂದು ಡಾ. ಮಂಜುನಾಥ್ ಹೇಳಿದರು. </p>.<p>ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ಸಿಗಬೇಕು. ಅದಕ್ಕಾಗಿ, ತ್ವರಿತವಾಗಿ ಆಸ್ಪತ್ರೆಗೆ ತರಲು ಆಂಬುಲೆನ್ಸ್ ವ್ಯವಸ್ಥೆ ಅಗತ್ಯ. ಅಪಘಾತಗಳಾದಾಗ ಗೋಲ್ಡನ್ ಅವರ್ನಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಬೇಕು. ಆಗ ಪ್ರಾಣಾಪಾಯದಿಂದ ಅವರನ್ನು ಪಾರು ಮಾಡಬಹುದಾಗಿದೆ ಎಂದು ತಿಳಿಸಿದರು.</p>.<p>ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್, ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಡಾ.ಮಂಜುನಾಥ್, ಟ್ರಸ್ಟ್ ಉಪಾಧ್ಯಕ್ಷೆ ಎನ್.ಎಚ್. ಲಕ್ಷ್ಮಿ ನರಸು, ಬಿಜೆಪಿ ಜಿಲ್ಲಾಧ್ಯಕ್ಷ ಆನಂದ ಸ್ವಾಮಿ, ಗೌತಮ್ ಗೌಡ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ನಗರದಲ್ಲಿರುವ ಜಿಲ್ಲಾ ಆಸ್ಪತ್ರೆಗೆ ಶಾರದಾ ಚಾರಿಟೇಬಲ್ ಟ್ರಸ್ಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯಲ್ಲಿ(ಸಿಎಸ್ಆರ್ ಫಂಡ್) ನೀಡಿರುವ ಅತ್ಯಾಧುನಿಕ ಆಂಬ್ಯುಲೆನ್ಸ್ ಅನ್ನು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ಅವರು ಜಿಲ್ಲಾಸ್ಪತ್ರೆಗೆ ಇತ್ತೀಚೆಗೆ ಹಸ್ತಾಂತರಿಸಿದರು.</p>.<p>‘ಸಿಎಸ್ಆರ್ ಅನುದಾನದಲ್ಲಿ ರಾಮನಗರ ಜಿಲ್ಲಾಸ್ಪತ್ರೆಗೆ ಒಂದು ಆಂಬುಲೆನ್ಸ್ ಕೊಡುಗೆಯಾಗಿ ನೀಡುವಂತೆ ಟ್ರಸ್ಟ್ಗೆ ಮನವಿ ಮಾಡಿದ್ದೆ. ಅದಕ್ಕೆ ಟ್ರಸ್ಟ್ ಸ್ಪಂದಿಸಿದೆ. ಈ ಆಂಬುಲೆನ್ಸ್ ತುರ್ತು ಸಂದರ್ಭದಲ್ಲಿ ರೋಗಿಗಳಿಗೆ ತ್ವರಿತ ಹಾಗೂ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಸಹಾಯವಾಗಲಿದೆ’ ಎಂದು ಡಾ. ಮಂಜುನಾಥ್ ಹೇಳಿದರು. </p>.<p>ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ಸಿಗಬೇಕು. ಅದಕ್ಕಾಗಿ, ತ್ವರಿತವಾಗಿ ಆಸ್ಪತ್ರೆಗೆ ತರಲು ಆಂಬುಲೆನ್ಸ್ ವ್ಯವಸ್ಥೆ ಅಗತ್ಯ. ಅಪಘಾತಗಳಾದಾಗ ಗೋಲ್ಡನ್ ಅವರ್ನಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಬೇಕು. ಆಗ ಪ್ರಾಣಾಪಾಯದಿಂದ ಅವರನ್ನು ಪಾರು ಮಾಡಬಹುದಾಗಿದೆ ಎಂದು ತಿಳಿಸಿದರು.</p>.<p>ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್, ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಡಾ.ಮಂಜುನಾಥ್, ಟ್ರಸ್ಟ್ ಉಪಾಧ್ಯಕ್ಷೆ ಎನ್.ಎಚ್. ಲಕ್ಷ್ಮಿ ನರಸು, ಬಿಜೆಪಿ ಜಿಲ್ಲಾಧ್ಯಕ್ಷ ಆನಂದ ಸ್ವಾಮಿ, ಗೌತಮ್ ಗೌಡ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>