ಕುದೂರು: ಸೋಲೂರು ಸರ್ಕಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈಚೆಗೆ ರಸ್ತೆ ದಾಟುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಹೆದ್ದಾರಿಯಲ್ಲಿ ಯೂಟರ್ನ್ ಬಳಿ ರಸ್ತೆ ದಾಟುತ್ತಿದ್ದ ಸೋಲೂರಿನ ಲಕ್ಷ್ಮೀಪತಯ್ಯ (80) ಎಂಬುವರಿಗೆ ಕುಣಿಗಲ್ ಕಡೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಬಸ್ ಡಿಕ್ಕಿ ಹೊಡೆದಿತ್ತು. ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು.
ಆರೋಗ್ಯದಲ್ಲಿ ಚೇತರಿಕೆ ಕಂಡ ಕಾರಣ ಆಸ್ಪತ್ರೆಯಿಂದ ಬಿಡುಗಡೆಗೊಂಡು ಬಂದ ಅವರ ಆರೋಗ್ಯದಲ್ಲಿ ಮತ್ತೆ ವ್ಯತ್ಯಾಸ ಕಂಡು ಬಂದ ಕಾರಣ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ.