ಮಾಗಡಿ: ಭೂಮಿ ಹದಗೊಳಿಸುವಾಗ ಪತ್ತೆಯಾಯ್ತು ಪುರಾತನ ಕಾಲದ ಸಿಹಿನೀರಿನ ಬಾವಿ

ಮಾಗಡಿ: ತಾಲ್ಲೂಕಿನ ಸರ್ವಧರ್ಮ ಸಮನ್ವಯ ನೆಲೆ ಕಲ್ಯಾದ ಬೆಟ್ಟದ ತಪ್ಪಲಿನ ರೈತನ ಜಮೀನಿನಲ್ಲಿ ಭೂಮಿ ಸಮಗೊಳಿಸುತ್ತಿದ್ದಾಗ ಪುರಾತನ ಕಾಲದ ಮಣ್ಣಿನ ಬಳೆಗಳನ್ನು ಅಳವಡಿಸಿರುವ ಸಿಹಿನೀರಿನ ಬಾವಿ ಪತ್ತೆಯಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಇಒ ಟಿ.ಪ್ರದೀಪ್ ತಿಳಿಸಿದರು.
ಕಲ್ಯಾಬೆಟ್ಟದ ತಪ್ಪಲಿನಲ್ಲಿ ವಿಜಯನಗರ ಅರಸು ಬುಕ್ಕರಾಯನ ಧರ್ಮಸಮನ್ವಯ ಶಿಲಾ ಶಾಸನ ಸುರಕ್ಷಣೆಯ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು.
‘ಬೌದ್ಧ, ಜೈನ, ವೈಷ್ಣವ, ಶೈವರ ನೆಲೆಯಾಗಿದ್ದ ಕಲ್ಯಾದ ಸಾಂಸ್ಕೃತಿಕ, ಚಾರಿತ್ರಿಕ ಶಿಲಾಶಾಸನ, ವೀರಗಲ್ಲು, ಕೆರೆಕಟ್ಟೆ ಕಲ್ಯಾಣಿಗಳನ್ನು ರಕ್ಷಿಸುವ ಕೆಲಸ ಮಾಡಲಾಗುತ್ತಿದೆ. ಪತ್ತೆಯಾಗಿರುವ ಸಿಹಿನೀರಿನ ಬಾವಿಯಲ್ಲಿ ಇಂದಿಗೂ ನೀರಿದ್ದು, ಬಾವಿಯಲ್ಲಿ ಮಣ್ಣಿನ ಬಳೆಗಳನ್ನು ಜೋಡಿಸಿ ಕಟ್ಟಿರುವ ಬಗ್ಗೆ ಇತಿಹಾಸ ಸಂಶೋಧಕರು ಸಂಶೋಧನೆ ಮಾಡುವ ಮೂಲಕ ಬಾವಿಯ ಮಹತ್ವವನ್ನು ಕಂಡುಹಿಡಿಯಬೇಕಿದೆ’ ಎಂದರು.
ಇತಿಹಾಸ ಸಂಶೋಧಕರ ಡಾ.ಮುನಿರಾಜಪ್ಪ ಮಾತನಾಡಿ, ‘ಸಿಂದೂಕೊಳ್ಳದ ನಾಗರಿಕತೆಯ ಕಾಲದಲ್ಲಿ ಸುಟ್ಟ ಇಟ್ಟಿಗೆಗಳನ್ನು ಬಳಸಿ, ಸಿಹಿನೀರಿನ ಬಾವಿಗಳನ್ನು ನಿರ್ಮಿಸಲಾಗುತ್ತಿತ್ತು. ಕಲ್ಯಾದ ಚಾರಿತ್ರಿಕ ಅಂಶಗಳು ಸಿಂದೂಕೊಳ್ಳದ ನಾಗರಿಕತೆಯ ಕುರುಹುಗಳನ್ನು ಪ್ರತಿಬಿಂಬಿಸುತ್ತಿದೆ. ದೊರತಿರುವ ಮಣ್ಣಿನ ಬಳೆಗಳಿಂದ ನಿರ್ಮಿಸಲಾಗಿರುವ ಸಿಹಿನೀರಿನ ಬಾವಿಯ ಬಗ್ಗೆ ತಲಸ್ಪರ್ಶಿ ಅಧ್ಯಯನ ನಡೆಸಲಾಗುವುದು’ ಎಂದರು.
ಹಿಂದೂ-ಮುಸ್ಲಿಮರು ಒಂದೇ ತಾಯಿ ಮಕ್ಕಳಂತೆ ಇರಬೇಕೆಂಬುದು ಮೋದಿ ಅಪೇಕ್ಷೆ: ಬಿಎಸ್ವೈ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.