‘ಬೌದ್ಧ, ಜೈನ, ವೈಷ್ಣವ, ಶೈವರ ನೆಲೆಯಾಗಿದ್ದ ಕಲ್ಯಾದ ಸಾಂಸ್ಕೃತಿಕ, ಚಾರಿತ್ರಿಕ ಶಿಲಾಶಾಸನ, ವೀರಗಲ್ಲು, ಕೆರೆಕಟ್ಟೆ ಕಲ್ಯಾಣಿಗಳನ್ನು ರಕ್ಷಿಸುವ ಕೆಲಸ ಮಾಡಲಾಗುತ್ತಿದೆ. ಪತ್ತೆಯಾಗಿರುವ ಸಿಹಿನೀರಿನ ಬಾವಿಯಲ್ಲಿ ಇಂದಿಗೂ ನೀರಿದ್ದು, ಬಾವಿಯಲ್ಲಿ ಮಣ್ಣಿನ ಬಳೆಗಳನ್ನು ಜೋಡಿಸಿ ಕಟ್ಟಿರುವ ಬಗ್ಗೆ ಇತಿಹಾಸ ಸಂಶೋಧಕರು ಸಂಶೋಧನೆ ಮಾಡುವ ಮೂಲಕ ಬಾವಿಯ ಮಹತ್ವವನ್ನು ಕಂಡುಹಿಡಿಯಬೇಕಿದೆ’ ಎಂದರು.