ಅಂಗನವಾಡಿ ಕೇಂದ್ರ ಪುನರಾರಂಭ

ಮಾಗಡಿ: ಕೊರೊನಾ ಸೋಂಕಿನಿಂದ ಮುಚ್ಚಿದ್ದ ಅಂಗನವಾಡಿ ಕೇಂದ್ರಗಳು ಸೋಮವಾರದಿಂದ ಪುನರಾರಂಭಗೊಂಡವು.
ಪಟ್ಟಣದ ಸೋಮೇಶ್ವರ ಬಡಾವಣೆಯ ವಡ್ಡರಪಾಳ್ಯದ ಅಂಗನವಾಡಿಯಲ್ಲಿ ತಳಿರುತೋರಣ ಕಟ್ಟಿ, ಪುಟಾಣಿಗಳಿಗೆ ಸಿಡಿಪಿಒ ಸುರೇಂದ್ರ ಮತ್ತು ಕಾರ್ಯಕರ್ತೆ ಮೀನಾ ಜಯರಾಮ್ ಹೂವು ನೀಡಿ ಸ್ವಾಗತಿಸಿದರು. ಬಳಿಕ ಸಿಹಿ ವಿತರಿಸಲಾಯಿತು. ಸಹಾಯಕಿ ಚಂದ್ರಮ್ಮ ಹಾಗೂ ಪೋಷಕರು ಇದ್ದರು.
ಕೇಂದ್ರದ ಮುಂಭಾಗ ರಂಗೋಲಿ ಹಾಕಲಾಗಿತ್ತು. ಮಕ್ಕಳಿಗೆ ಅಟಿಕೆಗಳನ್ನು ನೀಡಿ ಆಡಿಸಲಾಯಿತು. ಮುತ್ತುಸಾಗರ ಮತ್ತು ಬಿಸ್ಕೂರು ಅಂಗನವಾಡಿ ಕೇಂದ್ರಗಳಲ್ಲಿ ಬಿಸ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಮ್ಮ ದೊಡ್ಡಯ್ಯ, ಉಪಾಧ್ಯಕ್ಷೆ ಗಂಗಮ್ಮ ಶಿವಣ್ಣ, ಸದಸ್ಯೆ ಮುಬಿನಾ ಸುಹೇಲ್, ಅಂಗನವಾಡಿ ಕಾರ್ಯಕರ್ತೆ ಮಲ್ಲಿಕಾಂಬ, ರವಿಕುಮಾರ್, ವಸಂತಪ್ಪ ಮಕ್ಕಳಿಗೆ ಹೂ ನೀಡಿ ಸ್ವಾಗತಿಸಿದರು.
ಸೋಲೂರು ಅಂಗನವಾಡಿ ಕೇಂದ್ರ ಮತ್ತು ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಸಿಹಿ ವಿತರಿಸಿ ಸ್ವಾಗತಿಸಲಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.