<p><strong>ರಾಮನಗರ:</strong> ‘ಹೆಣ್ಣು ಶಕ್ತಿ ಮತ್ತು ಮಾತೃತ್ವದ ಸಂಕೇತ. ಸಮಾಜದ ಉನ್ನತಿಗೆ ಮಹಿಳಾ ಸಬಲೀಕರಣ ಅನಿವಾರ್ಯ. ಸಮಾನತೆ ಇರುವ ದೇಶವಷ್ಟೇ ಅಭಿವೃದ್ದಿ ಜೊತೆಗೆ ಬಲಶಾಲಿಯಾಗಿರಲು ಸಾಧ್ಯ’ ಎಂದು ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಅನ್ನದಾನೇಶ್ವರನಾಥ ಸ್ವಾಮೀಜಿ ಹೇಳಿದರು.</p>.<p>ನಗರದ ಪಟೇಲ್ ಆಂಗ್ಲ ಶಾಲೆ ಆವರಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ರಾಮನಗರ ತಾಲ್ಲೂಕು ನೇಗಿಲಯೋಗಿ ಮಹಿಳಾ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಮಹಿಳೆಯರನ್ನು ದೈವಿಕ ಮಾತೃರೂಪದಲ್ಲಿ ಗೌರವಿಸಬೇಕು. ಶಿಕ್ಷಣದ ಮೂಲಕ ಅವರನ್ನು ಸಶಕ್ತಗೊಳಿಸಬೇಕು ಎಂಬುದು ಸ್ವಾಮಿ ವಿವೇಕಾನಂದರ ಆಶಯವಾಗಿತ್ತು’ ಎಂದರು.</p>.<p>‘ಅಂತರರಾಷ್ಟ್ರೀಯ ಮಹಿಳಾ ದಿನವು ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆಗಳನ್ನು ಗೌರವಿಸುವ ಮತ್ತು ಲಿಂಗ ಸಮಾನತೆಗಾಗಿ ಜಾಗೃತಿ ಮೂಡಿಸುವ ದಿನವಾಗಿದೆ. ಇದು ಮಹಿಳಾ ಹಕ್ಕುಗಳ ಹೋರಾಟವನ್ನು ನೆನಪಿಸುತ್ತಾ, ಸಮಾನ ಅವಕಾಶಗಳು, ಶಿಕ್ಷಣ ಮತ್ತು ಸಬಲೀಕರಣದ ಮೂಲಕ ಉತ್ತಮ ಭವಿಷ್ಯ ನಿರ್ಮಿಸಲು ನಮಗೆ ಸ್ಪೂರ್ತಿ ನೀಡುತ್ತದೆ’ ಎಂದು ತಿಳಿಸಿದರು.</p>.<p>‘ಎಲ್ಲಿ ಮಹಿಳೆಯರನ್ನು ಪೂಜಿಸಿ ಗೌರವಿಸುತ್ತಾರೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ ಎಂಬ ಮಾತಿದೆ. ಮಹಿಳೆಯ ರಕ್ಷಣೆ, ಹಕ್ಕುಗಳು, ಮುಂತಾದ ವಿಷಯಗಳ ಕುರಿತು ಜಾಗೃತಿ ಮೂಡಿಸುವ ಕೆಲಸಕ್ಕೆ ನೇಗಿಲಯೋಗಿ ಮಹಿಳಾ ಘಟಕ ಮುಂದಾಗಬೇಕು. ತಮ್ಮ ಹಕ್ಕುಗಳಿಗೆ ಸಂಘಟಿತರಾಗಿ ಹೋರಾಟ ಮಾಡಬೇಕು’ ಎಂದರು.</p>.<p>ಟ್ರಸ್ಟ್ನ ಜಿಲ್ಲಾ ಘಟಕದ ಅಧ್ಯಕ್ಷ ಪಟೇಲ್ ಸಿ. ರಾಜು ಮಾತನಾಡಿ, ‘ ಟ್ರಸ್ಟ್ ಕಳೆದ ಐದು ವರ್ಷಗಳಿಂದ ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬರುತ್ತಿದೆ. ಜಿಲ್ಲೆಯಲ್ಲಿ ಮಹಿಳಾ ಘಟಕವನ್ನು ಅಸ್ತಿತ್ವಕ್ಕೆ ತಂದಿದ್ದು, ಆ ಮೂಲಕ ಮಹಿಳಾ ಸಬಲೀಕರಣಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಮಾಡಲು ಮುಂದಾಗಿದ್ದೇವೆ’ ಎಂದು ಹೇಳಿದರು.</p>.<p>ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಸಾವಿತ್ರಿ ಬಾಯಿ ಪುಲೆ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು. ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಟಿ. ತಿಮ್ಮೇಗೌಡ, ರವಿಕುಮಾರ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ. ಸತೀಶ್, ನೇಗಿಲಯೋಗಿ ರಾಮನಗರ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಎಚ್.ಎಸ್. ಗೌರವಾಧ್ಯಕ್ಷೆ ಗೌರಮ್ಮ, ಉಪಾಧ್ಯಕ್ಷೆ ನಾಗಮಣಿ, ಪ್ರಧಾನ ಕಾರ್ಯದರ್ಶಿ ಸಾಕಮ್ಮ, ಖಜಾಂಚಿ ಜಗದಾಂಬ, ಸಹ ಕಾರ್ಯದರ್ಶಿ ಶಶಿಕಲಾ ಕೆ. ಎಸ್., ಪದಾಧಿಕಾರಿಗಳಾದ ವಿನೋದಮ್ಮ, ಯೋಗಿತಾ, ಡಾ. ಉಮಾ, ವಕೀಲೆ ಲಕ್ಷ್ಮಮ್ಮ, ಸರಸ್ವತಿ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ‘ಹೆಣ್ಣು ಶಕ್ತಿ ಮತ್ತು ಮಾತೃತ್ವದ ಸಂಕೇತ. ಸಮಾಜದ ಉನ್ನತಿಗೆ ಮಹಿಳಾ ಸಬಲೀಕರಣ ಅನಿವಾರ್ಯ. ಸಮಾನತೆ ಇರುವ ದೇಶವಷ್ಟೇ ಅಭಿವೃದ್ದಿ ಜೊತೆಗೆ ಬಲಶಾಲಿಯಾಗಿರಲು ಸಾಧ್ಯ’ ಎಂದು ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಅನ್ನದಾನೇಶ್ವರನಾಥ ಸ್ವಾಮೀಜಿ ಹೇಳಿದರು.</p>.<p>ನಗರದ ಪಟೇಲ್ ಆಂಗ್ಲ ಶಾಲೆ ಆವರಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ರಾಮನಗರ ತಾಲ್ಲೂಕು ನೇಗಿಲಯೋಗಿ ಮಹಿಳಾ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಮಹಿಳೆಯರನ್ನು ದೈವಿಕ ಮಾತೃರೂಪದಲ್ಲಿ ಗೌರವಿಸಬೇಕು. ಶಿಕ್ಷಣದ ಮೂಲಕ ಅವರನ್ನು ಸಶಕ್ತಗೊಳಿಸಬೇಕು ಎಂಬುದು ಸ್ವಾಮಿ ವಿವೇಕಾನಂದರ ಆಶಯವಾಗಿತ್ತು’ ಎಂದರು.</p>.<p>‘ಅಂತರರಾಷ್ಟ್ರೀಯ ಮಹಿಳಾ ದಿನವು ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆಗಳನ್ನು ಗೌರವಿಸುವ ಮತ್ತು ಲಿಂಗ ಸಮಾನತೆಗಾಗಿ ಜಾಗೃತಿ ಮೂಡಿಸುವ ದಿನವಾಗಿದೆ. ಇದು ಮಹಿಳಾ ಹಕ್ಕುಗಳ ಹೋರಾಟವನ್ನು ನೆನಪಿಸುತ್ತಾ, ಸಮಾನ ಅವಕಾಶಗಳು, ಶಿಕ್ಷಣ ಮತ್ತು ಸಬಲೀಕರಣದ ಮೂಲಕ ಉತ್ತಮ ಭವಿಷ್ಯ ನಿರ್ಮಿಸಲು ನಮಗೆ ಸ್ಪೂರ್ತಿ ನೀಡುತ್ತದೆ’ ಎಂದು ತಿಳಿಸಿದರು.</p>.<p>‘ಎಲ್ಲಿ ಮಹಿಳೆಯರನ್ನು ಪೂಜಿಸಿ ಗೌರವಿಸುತ್ತಾರೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ ಎಂಬ ಮಾತಿದೆ. ಮಹಿಳೆಯ ರಕ್ಷಣೆ, ಹಕ್ಕುಗಳು, ಮುಂತಾದ ವಿಷಯಗಳ ಕುರಿತು ಜಾಗೃತಿ ಮೂಡಿಸುವ ಕೆಲಸಕ್ಕೆ ನೇಗಿಲಯೋಗಿ ಮಹಿಳಾ ಘಟಕ ಮುಂದಾಗಬೇಕು. ತಮ್ಮ ಹಕ್ಕುಗಳಿಗೆ ಸಂಘಟಿತರಾಗಿ ಹೋರಾಟ ಮಾಡಬೇಕು’ ಎಂದರು.</p>.<p>ಟ್ರಸ್ಟ್ನ ಜಿಲ್ಲಾ ಘಟಕದ ಅಧ್ಯಕ್ಷ ಪಟೇಲ್ ಸಿ. ರಾಜು ಮಾತನಾಡಿ, ‘ ಟ್ರಸ್ಟ್ ಕಳೆದ ಐದು ವರ್ಷಗಳಿಂದ ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬರುತ್ತಿದೆ. ಜಿಲ್ಲೆಯಲ್ಲಿ ಮಹಿಳಾ ಘಟಕವನ್ನು ಅಸ್ತಿತ್ವಕ್ಕೆ ತಂದಿದ್ದು, ಆ ಮೂಲಕ ಮಹಿಳಾ ಸಬಲೀಕರಣಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಮಾಡಲು ಮುಂದಾಗಿದ್ದೇವೆ’ ಎಂದು ಹೇಳಿದರು.</p>.<p>ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಸಾವಿತ್ರಿ ಬಾಯಿ ಪುಲೆ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು. ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಟಿ. ತಿಮ್ಮೇಗೌಡ, ರವಿಕುಮಾರ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ. ಸತೀಶ್, ನೇಗಿಲಯೋಗಿ ರಾಮನಗರ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಎಚ್.ಎಸ್. ಗೌರವಾಧ್ಯಕ್ಷೆ ಗೌರಮ್ಮ, ಉಪಾಧ್ಯಕ್ಷೆ ನಾಗಮಣಿ, ಪ್ರಧಾನ ಕಾರ್ಯದರ್ಶಿ ಸಾಕಮ್ಮ, ಖಜಾಂಚಿ ಜಗದಾಂಬ, ಸಹ ಕಾರ್ಯದರ್ಶಿ ಶಶಿಕಲಾ ಕೆ. ಎಸ್., ಪದಾಧಿಕಾರಿಗಳಾದ ವಿನೋದಮ್ಮ, ಯೋಗಿತಾ, ಡಾ. ಉಮಾ, ವಕೀಲೆ ಲಕ್ಷ್ಮಮ್ಮ, ಸರಸ್ವತಿ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>