<p><strong>ರಾಮನಗರ:</strong> ತಾಲ್ಲೂಕಿನ ಹುಣಸೇದೊಡ್ಡಿ ಹಾಲು ಉತ್ಪಾದಕರ ಸಂಘಕ್ಕೆ ವಿಶೇಷಾಧಿಕಾರಿ ನೇಮಕ ಮಾಡಿ ಸಹಕಾರ ಸಂಘಗಳ ನಿಬಂಧಕ ವೈ. ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.</p>.<p>ಸಂಘದ ಐದು ನಿರ್ದೇಶಕರು ಈಚೆಗೆ ರಾಜೀನಾಮೆ ನೀಡಿದ್ದು, ಅವರಲ್ಲಿ ಇಬ್ಬರು ಮಾತ್ರ ನಾಮಪತ್ರ ಹಿಂಪಡೆದಿದ್ದಾರೆ. ಈ ನಡುವೆ ಸಂಘದ ಮುಖ್ಯ ಕಾರ್ಯ ನಿರ್ವಾಹಕ ಮುತ್ತುರಾಜು ಅವರ ತಂದೆ ವೀರಭದ್ರಯ್ಯ ಅವರು ಸಂಘದ ನಿರ್ದೇಶಕರಾಗಿದ್ದಾರೆ. ಅವರ ಆಯ್ಕೆಯು ಕಾನೂನಿಗೆ ವಿರುದ್ಧವಾಗಿದ್ದು, ಅವರ ಸದಸ್ಯತ್ವ ರದ್ದಾಗುವ ಸಾಧ್ಯತೆ ಇದೆ. ಹೀಗಾದಲ್ಲಿ ಡೇರಿಯಲ್ಲಿ ಕೋರಂ ಕೊರತೆ ಎದುರಾಗಲಿದೆ.</p>.<p>ಹೀಗಾಗಿ ಸಹಕಾರ ಸಂಘದ ಅಧಿನಿಯಮದಂತೆ ಕಚೇರಿಯ ದ್ವಿತೀಯದರ್ಜೆ ಸಹಾಯಕ ವಿ. ಶಿನಾನಂದ ರೆಡ್ಡಿ ಅವರನ್ನು ಹುಣಸೇದೊಡ್ಡಿ ಡೇರಿಗೆ ವಿಶೇಷಾಧಿಕಾರಿಯಾಗಿ ನೇಮಕ ಮಾಡಿದ್ದು, ಅಧಿಕಾರ ವಹಿಸಿಕೊಂಡು ಸಂಘದ ಆಡಳಿತ ಮಂಡಳಿ ಪುನರ್ ರಚನೆಗೆ ಅಗತ್ಯ ಪ್ರಸ್ತಾವ ಸಲ್ಲಿಸಲು ಸೂಚಿಸಲಾಗಿದೆ ಎಂದು ಆದೇಶದಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ತಾಲ್ಲೂಕಿನ ಹುಣಸೇದೊಡ್ಡಿ ಹಾಲು ಉತ್ಪಾದಕರ ಸಂಘಕ್ಕೆ ವಿಶೇಷಾಧಿಕಾರಿ ನೇಮಕ ಮಾಡಿ ಸಹಕಾರ ಸಂಘಗಳ ನಿಬಂಧಕ ವೈ. ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.</p>.<p>ಸಂಘದ ಐದು ನಿರ್ದೇಶಕರು ಈಚೆಗೆ ರಾಜೀನಾಮೆ ನೀಡಿದ್ದು, ಅವರಲ್ಲಿ ಇಬ್ಬರು ಮಾತ್ರ ನಾಮಪತ್ರ ಹಿಂಪಡೆದಿದ್ದಾರೆ. ಈ ನಡುವೆ ಸಂಘದ ಮುಖ್ಯ ಕಾರ್ಯ ನಿರ್ವಾಹಕ ಮುತ್ತುರಾಜು ಅವರ ತಂದೆ ವೀರಭದ್ರಯ್ಯ ಅವರು ಸಂಘದ ನಿರ್ದೇಶಕರಾಗಿದ್ದಾರೆ. ಅವರ ಆಯ್ಕೆಯು ಕಾನೂನಿಗೆ ವಿರುದ್ಧವಾಗಿದ್ದು, ಅವರ ಸದಸ್ಯತ್ವ ರದ್ದಾಗುವ ಸಾಧ್ಯತೆ ಇದೆ. ಹೀಗಾದಲ್ಲಿ ಡೇರಿಯಲ್ಲಿ ಕೋರಂ ಕೊರತೆ ಎದುರಾಗಲಿದೆ.</p>.<p>ಹೀಗಾಗಿ ಸಹಕಾರ ಸಂಘದ ಅಧಿನಿಯಮದಂತೆ ಕಚೇರಿಯ ದ್ವಿತೀಯದರ್ಜೆ ಸಹಾಯಕ ವಿ. ಶಿನಾನಂದ ರೆಡ್ಡಿ ಅವರನ್ನು ಹುಣಸೇದೊಡ್ಡಿ ಡೇರಿಗೆ ವಿಶೇಷಾಧಿಕಾರಿಯಾಗಿ ನೇಮಕ ಮಾಡಿದ್ದು, ಅಧಿಕಾರ ವಹಿಸಿಕೊಂಡು ಸಂಘದ ಆಡಳಿತ ಮಂಡಳಿ ಪುನರ್ ರಚನೆಗೆ ಅಗತ್ಯ ಪ್ರಸ್ತಾವ ಸಲ್ಲಿಸಲು ಸೂಚಿಸಲಾಗಿದೆ ಎಂದು ಆದೇಶದಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>