<p><strong>ರಾಮನಗರ: </strong>ಶಿಕ್ಷಕರಾದವರಿಗೆ, ಪ್ರಶಿಕ್ಷಣಾರ್ಥಿಗಳಿಗೆ ಸಂಪರ್ಕ ಕೌಶಲ ಮುಖ್ಯ ಎಂದು ಕೆಟಿಎಸ್ ವಿ ಸಂಘದ ಅಧ್ಯಕ್ಷ ನೆ.ಲ. ನರೇಂದ್ರ ಬಾಬು ಹೇಳಿದರು.</p>.<p>ಬೆಂಗಳೂರು ರಾಜಾಜಿನಗರ ಶಿಕ್ಷಣ ಮಹಾವಿದ್ಯಾಲಯದ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗೆ ಇಲ್ಲಿನ ಜಾನಪದ ಲೋಕದಲ್ಲಿ ಆಯೋಜಿಸಿದ್ದ 'ಸಾಮುದಾಯಿಕ ಜೀವನ ಶಿಬಿರ' ದಲ್ಲಿ ಅವರು ಮಾತನಾಡಿದರು.</p>.<p>ಭವಿಷ್ಯದ ಸತ್ಪ್ರಜೆಗಳನ್ನು ರೂಪಿಸುವ ಹೊಣೆಗಾರಿಕೆ ನಿಮ್ಮ ಮೇಲಿದೆ. ಹಾಗಾಗಿ ಉತ್ತಮ ಸಂಪರ್ಕ ಕೌಶಲವುಳ್ಳ ವಿದ್ಯಾರ್ಥಿಗಳನ್ನು ತಯಾರು ಮಾಡಲು ತಾವು ತೊಡಗಿಸಿಕೊಳ್ಳುವ ಜತೆಗೆ ಜೀವನವನ್ನು ಸಮಾಜದ ಏಳಿಗೆಗಾಗಿ ಸಮರ್ಪಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಶಿಕ್ಷಣವನ್ನು ಭೂಮಿ, ಹಣ ನೀಡಿದಷ್ಟು ಸುಲಭವಾಗಿ ಕೊಡಲು ಸಾಧ್ಯವಿಲ್ಲ. ಅದನ್ನು ಪಡೆಯುವವರಲ್ಲೂ ಹಾಗೂ ನೀಡುವವರಲ್ಲೂ ಅಷ್ಟೇ ಶ್ರದ್ಧೆ, ವಿನಯ, ತಾಳ್ಮೆ ಬಹಳ ಮುಖ್ಯ. ಹಾಗಾದಲ್ಲಿ ಮಾತ್ರ ಜ್ಞಾನಾರ್ಜನೆಯ ಸಿಹಿಯನ್ನು ಸವಿಯಲು ಸಾಧ್ಯ ಎಂದು ತಿಳಿಸಿದರು.</p>.<p>‘ಶಿಕ್ಷಕರು ಸಮುದಾಯದ ಅದರ ಅಭಿವೃದ್ಧಿಗೆ ತೊಡಗಿಸಿಕೊಳ್ಳಲು ಎಲ್ಲರ ಮನಸ್ಸನ್ನು ಅರ್ಥೈಸಿಕೊಳ್ಳಬೇಕಾದ ಸನ್ನಿವೇಶಗಳು ಎದುರಾಗುತ್ತದೆ. ಅಂತಹ ಸಂದರ್ಭಗಳನ್ನು ನಿಭಾಯಿಸಬೇಕಾದಲ್ಲಿ ಮನಃಶಾಸ್ತ್ರ ಅನಿವಾರ್ಯವಾಗಿರುತ್ತದೆ. ಸಮಾಜದಲ್ಲಿ ಪ್ರತಿಯೊಬ್ಬರೂ ಆದರ್ಶಗಳನ್ನು, ಮೌಲ್ಯಗಳನ್ನು ಇಟ್ಟುಕೊಳ್ಳಬೇಕು. ಹಾಗಾದಲ್ಲಿ ಮಾತ್ರ ನಮ್ಮ ದೇಶವನ್ನು ಪ್ರಪಂಚದಲ್ಲಿಯೇ ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಇಂತಹ ಶಿಬಿರಗಳು ಪ್ರಶಿಕ್ಷಣಾರ್ಥಿಗಳಿಗೆ ಅವಶ್ಯಕ’ ಎಂದರು.</p>.<p>ಅಂಬೇಡ್ಕರ್ ಶಿಕ್ಷಣ ಮಹಾವಿದ್ಯಾಲಯದ ಡಿ.ಎನ್. ನಂಜುಂಡಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರಮುಖವಾಗಿ ಶ್ರದ್ಧೆ, ಸಮಯ ಪ್ರಜ್ಞೆ, ಇಚ್ಛಾಶಕ್ತಿ, ದೈಹಿಕ ಕ್ಷಮತೆ, ಚತುರತೆ, ಶಿಸ್ತು ಮುಖ್ಯವಾಗಿರಬೇಕು. ಇವುಗಳನ್ನು ಆವಾಹನೆ ಮಾಡಿದವರು ಉತ್ತಮ ಪ್ರಜೆಗಳನ್ನು ರೂಪಿಸಬಲ್ಲ ಶಕ್ತಿ ಸಂಪಾದಿಸುತ್ತಾರೆ ಎಂದು ತಿಳಿಸಿದರು.</p>.<p>ಕೆಟಿಎಸ್ ವಿ ಸಂಘದ ಕಾರ್ಯದರ್ಶಿ ಕೆಂಪಯ್ಯ ಶಿಬಿರ ಉದ್ಘಾಟಿಸಿದರು. ಪ್ರಾಚಾರ್ಯ ಡಾ. ಕೃಷ್ಣಮೂರ್ತಿ ಇದ್ದರು. ಶಿಬಿರಾಧಿಕಾರಿ ಡಾ. ಶಿವರಾಮಯ್ಯ ಸ್ವಾಗತಿಸಿದರು. ಡಾ. ಯೋಗೇಶ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಶಿಕ್ಷಕರಾದವರಿಗೆ, ಪ್ರಶಿಕ್ಷಣಾರ್ಥಿಗಳಿಗೆ ಸಂಪರ್ಕ ಕೌಶಲ ಮುಖ್ಯ ಎಂದು ಕೆಟಿಎಸ್ ವಿ ಸಂಘದ ಅಧ್ಯಕ್ಷ ನೆ.ಲ. ನರೇಂದ್ರ ಬಾಬು ಹೇಳಿದರು.</p>.<p>ಬೆಂಗಳೂರು ರಾಜಾಜಿನಗರ ಶಿಕ್ಷಣ ಮಹಾವಿದ್ಯಾಲಯದ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗೆ ಇಲ್ಲಿನ ಜಾನಪದ ಲೋಕದಲ್ಲಿ ಆಯೋಜಿಸಿದ್ದ 'ಸಾಮುದಾಯಿಕ ಜೀವನ ಶಿಬಿರ' ದಲ್ಲಿ ಅವರು ಮಾತನಾಡಿದರು.</p>.<p>ಭವಿಷ್ಯದ ಸತ್ಪ್ರಜೆಗಳನ್ನು ರೂಪಿಸುವ ಹೊಣೆಗಾರಿಕೆ ನಿಮ್ಮ ಮೇಲಿದೆ. ಹಾಗಾಗಿ ಉತ್ತಮ ಸಂಪರ್ಕ ಕೌಶಲವುಳ್ಳ ವಿದ್ಯಾರ್ಥಿಗಳನ್ನು ತಯಾರು ಮಾಡಲು ತಾವು ತೊಡಗಿಸಿಕೊಳ್ಳುವ ಜತೆಗೆ ಜೀವನವನ್ನು ಸಮಾಜದ ಏಳಿಗೆಗಾಗಿ ಸಮರ್ಪಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಶಿಕ್ಷಣವನ್ನು ಭೂಮಿ, ಹಣ ನೀಡಿದಷ್ಟು ಸುಲಭವಾಗಿ ಕೊಡಲು ಸಾಧ್ಯವಿಲ್ಲ. ಅದನ್ನು ಪಡೆಯುವವರಲ್ಲೂ ಹಾಗೂ ನೀಡುವವರಲ್ಲೂ ಅಷ್ಟೇ ಶ್ರದ್ಧೆ, ವಿನಯ, ತಾಳ್ಮೆ ಬಹಳ ಮುಖ್ಯ. ಹಾಗಾದಲ್ಲಿ ಮಾತ್ರ ಜ್ಞಾನಾರ್ಜನೆಯ ಸಿಹಿಯನ್ನು ಸವಿಯಲು ಸಾಧ್ಯ ಎಂದು ತಿಳಿಸಿದರು.</p>.<p>‘ಶಿಕ್ಷಕರು ಸಮುದಾಯದ ಅದರ ಅಭಿವೃದ್ಧಿಗೆ ತೊಡಗಿಸಿಕೊಳ್ಳಲು ಎಲ್ಲರ ಮನಸ್ಸನ್ನು ಅರ್ಥೈಸಿಕೊಳ್ಳಬೇಕಾದ ಸನ್ನಿವೇಶಗಳು ಎದುರಾಗುತ್ತದೆ. ಅಂತಹ ಸಂದರ್ಭಗಳನ್ನು ನಿಭಾಯಿಸಬೇಕಾದಲ್ಲಿ ಮನಃಶಾಸ್ತ್ರ ಅನಿವಾರ್ಯವಾಗಿರುತ್ತದೆ. ಸಮಾಜದಲ್ಲಿ ಪ್ರತಿಯೊಬ್ಬರೂ ಆದರ್ಶಗಳನ್ನು, ಮೌಲ್ಯಗಳನ್ನು ಇಟ್ಟುಕೊಳ್ಳಬೇಕು. ಹಾಗಾದಲ್ಲಿ ಮಾತ್ರ ನಮ್ಮ ದೇಶವನ್ನು ಪ್ರಪಂಚದಲ್ಲಿಯೇ ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಇಂತಹ ಶಿಬಿರಗಳು ಪ್ರಶಿಕ್ಷಣಾರ್ಥಿಗಳಿಗೆ ಅವಶ್ಯಕ’ ಎಂದರು.</p>.<p>ಅಂಬೇಡ್ಕರ್ ಶಿಕ್ಷಣ ಮಹಾವಿದ್ಯಾಲಯದ ಡಿ.ಎನ್. ನಂಜುಂಡಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರಮುಖವಾಗಿ ಶ್ರದ್ಧೆ, ಸಮಯ ಪ್ರಜ್ಞೆ, ಇಚ್ಛಾಶಕ್ತಿ, ದೈಹಿಕ ಕ್ಷಮತೆ, ಚತುರತೆ, ಶಿಸ್ತು ಮುಖ್ಯವಾಗಿರಬೇಕು. ಇವುಗಳನ್ನು ಆವಾಹನೆ ಮಾಡಿದವರು ಉತ್ತಮ ಪ್ರಜೆಗಳನ್ನು ರೂಪಿಸಬಲ್ಲ ಶಕ್ತಿ ಸಂಪಾದಿಸುತ್ತಾರೆ ಎಂದು ತಿಳಿಸಿದರು.</p>.<p>ಕೆಟಿಎಸ್ ವಿ ಸಂಘದ ಕಾರ್ಯದರ್ಶಿ ಕೆಂಪಯ್ಯ ಶಿಬಿರ ಉದ್ಘಾಟಿಸಿದರು. ಪ್ರಾಚಾರ್ಯ ಡಾ. ಕೃಷ್ಣಮೂರ್ತಿ ಇದ್ದರು. ಶಿಬಿರಾಧಿಕಾರಿ ಡಾ. ಶಿವರಾಮಯ್ಯ ಸ್ವಾಗತಿಸಿದರು. ಡಾ. ಯೋಗೇಶ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>