<p><strong>ಚನ್ನಪಟ್ಟಣ</strong>: ‘ಶಾಸಕ ಅರವಿಂದ್ ಬೆಲ್ಲದ್ ದೆಹಲಿ ಪ್ರವಾಸದ ವಿಚಾರ ನನಗೆ ಗೊತ್ತಿಲ್ಲ’ ಎಂದು ಸಚಿವ ಸಿ.ಪಿ. ಯೋಗೇಶ್ವರ್ ಪ್ರತಿಕ್ರಿಯಿಸಿದರು.</p>.<p>ಚನ್ನಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅದು ನನಗೆ ಗೊತ್ತಿಲ್ಲ. ನಾನು ರಾಜಕೀಯ ಮಾತನಾಡುವುದಿಲ್ಲ. ಸುಖಾಸುಮ್ಮನೆ ವಿವಾದವಾಗುತ್ತದೆ’ ಎಂದರು.</p>.<p>ಮುಖ್ಯಮಂತ್ರಿ ಯಡಿಯೂರಪ್ಪ ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿ ಎಂದು ನೀಡಿರುವ ಹೇಳಿಕೆ ಬಗ್ಗೆ ಮಾತನಾಡಿದ ಯೋಗೇಶ್ವರ್, ‘ಈಗ ಯಾರು ಬೇಡ ಎಂದಿದ್ದಾರೆ. ಈ ವಿಚಾರವಾಗಿಯೂ ನಾನು ಮಾತನಾಡುವುದಿಲ್ಲ’ ಎಂದರು.</p>.<p>ರಾಜ್ಯಕ್ಕೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ ವಿಚಾರವಾಗಿ ಮಾತನಾಡಿದ ಅವರು, ‘ಅರುಣ್ ಸಿಂಗ್ ನಮ್ಮ ನಾಯಕರು. ಶಾಸಕರನ್ನು ಭೇಟಿಯಾಗಲು ಬರುತ್ತಿದ್ದಾರೆ. ನಾನು ಸಹ ಅವರನ್ನು ಭೇಟಿ ಮಾಡುತ್ತೇನೆ. ಸರ್ಕಾರ ಕೊಂಚ ವೇಗವಾಗಿ ನಡೆಯಲು ಬಯಸಿದ್ದೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ‘ಶಾಸಕ ಅರವಿಂದ್ ಬೆಲ್ಲದ್ ದೆಹಲಿ ಪ್ರವಾಸದ ವಿಚಾರ ನನಗೆ ಗೊತ್ತಿಲ್ಲ’ ಎಂದು ಸಚಿವ ಸಿ.ಪಿ. ಯೋಗೇಶ್ವರ್ ಪ್ರತಿಕ್ರಿಯಿಸಿದರು.</p>.<p>ಚನ್ನಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅದು ನನಗೆ ಗೊತ್ತಿಲ್ಲ. ನಾನು ರಾಜಕೀಯ ಮಾತನಾಡುವುದಿಲ್ಲ. ಸುಖಾಸುಮ್ಮನೆ ವಿವಾದವಾಗುತ್ತದೆ’ ಎಂದರು.</p>.<p>ಮುಖ್ಯಮಂತ್ರಿ ಯಡಿಯೂರಪ್ಪ ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿ ಎಂದು ನೀಡಿರುವ ಹೇಳಿಕೆ ಬಗ್ಗೆ ಮಾತನಾಡಿದ ಯೋಗೇಶ್ವರ್, ‘ಈಗ ಯಾರು ಬೇಡ ಎಂದಿದ್ದಾರೆ. ಈ ವಿಚಾರವಾಗಿಯೂ ನಾನು ಮಾತನಾಡುವುದಿಲ್ಲ’ ಎಂದರು.</p>.<p>ರಾಜ್ಯಕ್ಕೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ ವಿಚಾರವಾಗಿ ಮಾತನಾಡಿದ ಅವರು, ‘ಅರುಣ್ ಸಿಂಗ್ ನಮ್ಮ ನಾಯಕರು. ಶಾಸಕರನ್ನು ಭೇಟಿಯಾಗಲು ಬರುತ್ತಿದ್ದಾರೆ. ನಾನು ಸಹ ಅವರನ್ನು ಭೇಟಿ ಮಾಡುತ್ತೇನೆ. ಸರ್ಕಾರ ಕೊಂಚ ವೇಗವಾಗಿ ನಡೆಯಲು ಬಯಸಿದ್ದೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>