<p><strong>ರಾಮನಗರ</strong>: ತಾಲ್ಲೂಕಿನ ಕೂಟಗಲ್ ಹೋಬಳಿಯ ಅರೇಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2024–25ನೇ ಸಾಲಿನಲ್ಲಿ ₹3.91 ಲಕ್ಷ ನಿವ್ವಳ ಲಾಭ ಗಳಿಸಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸಂಘದ ಅಧ್ಯಕ್ಷ ನಾಗರಾಜು ಅಂಕಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ನಡೆಯಿತು.</p>.<p>ಸಭೆಯಲ್ಲಿ ವರದಿ ಮಂಡಿಸಿದ ಸಂಘದ ಮುಖ್ಯ ಕಾರ್ಯನಿರ್ವಾಹಕ ಎ.ವಿ. ಕಿಶೋರ್ ಗೌಡ, ‘ಸಂಘವು ಗಳಿಸಿರುವ ₹3.91 ಲಕ್ಷ ಲಾಭದ ಪೈಕಿ, ₹1.68 ಲಕ್ಷವನ್ನು ಹಾಲು ಉತ್ಪಾದಕರಿಗೆ ಬೋನಸ್ ಆಗಿ ನೀಡಲಾಗುವುದು’ ಎಂದು ತಿಳಿಸಿದರು.</p>.<p>ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಮೂಲ್ ರಾಮನಗರ ಶಿಬಿರ ಕಚೇರಿ ಉಪ ವ್ಯವಸ್ಥಾಪಕ ಟಿ.ಜಿ. ಗಣೇಶ್ ಮಾತನಾಡಿ, ‘ಗುಣಮಟ್ಟದ ಹಾಲು ಉತ್ಪಾದನೆ ಮಾಡಿದ್ದಲ್ಲಿ ಮಾತ್ರ ರೈತರಿಗೆ ಹೆಚ್ಚಿನ ಹಾಲಿನ ಜೊತೆಗೆ ಲಾಭವೂ ಸಿಗಲಿದೆ. ಈ ನಿಟ್ಟಿನಲ್ಲಿ ಹಸುಗಳ ಆರೋಗ್ಯದ ಕಡೆಗೂ ರೈತರು ಒತ್ತು ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ಸಂಘಕ್ಕೆ ಅತಿ ಹೆಚ್ಚು ಹಾಲು ಪೂರೈಸಿದ ಸದಸ್ಯರಾದ ಸದಸ್ಯರಾದ ಚಿಕ್ಕೇಗೌಡ, ನಾಗರಾಜು, ಗಂಗರಾಜು, ಶಶಿಕುಮಾರ್, ಸರಸ್ವತಿ ಹಾಗೂ ಸಂಘದ ನಿರ್ದೇಶಕರೂ ಆಗಿರುವ ಗ್ರಾಮ ಪಂಚಾಯತಿ ಸದಸ್ಯ ಎ.ಬಿ. ಗಂಗಾಧರ್ ಗೌಡ ಅವರನ್ನು ಸನ್ಮಾನಿಸಲಾಯಿತು. ಸಂಘದ ನಿರ್ದೇಶಕ ಎ.ಆರ್. ತ್ರಿಮೂರ್ತಿ ಅತಿಥಿಗಳನ್ನು ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ತಾಲ್ಲೂಕಿನ ಕೂಟಗಲ್ ಹೋಬಳಿಯ ಅರೇಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2024–25ನೇ ಸಾಲಿನಲ್ಲಿ ₹3.91 ಲಕ್ಷ ನಿವ್ವಳ ಲಾಭ ಗಳಿಸಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸಂಘದ ಅಧ್ಯಕ್ಷ ನಾಗರಾಜು ಅಂಕಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ನಡೆಯಿತು.</p>.<p>ಸಭೆಯಲ್ಲಿ ವರದಿ ಮಂಡಿಸಿದ ಸಂಘದ ಮುಖ್ಯ ಕಾರ್ಯನಿರ್ವಾಹಕ ಎ.ವಿ. ಕಿಶೋರ್ ಗೌಡ, ‘ಸಂಘವು ಗಳಿಸಿರುವ ₹3.91 ಲಕ್ಷ ಲಾಭದ ಪೈಕಿ, ₹1.68 ಲಕ್ಷವನ್ನು ಹಾಲು ಉತ್ಪಾದಕರಿಗೆ ಬೋನಸ್ ಆಗಿ ನೀಡಲಾಗುವುದು’ ಎಂದು ತಿಳಿಸಿದರು.</p>.<p>ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಮೂಲ್ ರಾಮನಗರ ಶಿಬಿರ ಕಚೇರಿ ಉಪ ವ್ಯವಸ್ಥಾಪಕ ಟಿ.ಜಿ. ಗಣೇಶ್ ಮಾತನಾಡಿ, ‘ಗುಣಮಟ್ಟದ ಹಾಲು ಉತ್ಪಾದನೆ ಮಾಡಿದ್ದಲ್ಲಿ ಮಾತ್ರ ರೈತರಿಗೆ ಹೆಚ್ಚಿನ ಹಾಲಿನ ಜೊತೆಗೆ ಲಾಭವೂ ಸಿಗಲಿದೆ. ಈ ನಿಟ್ಟಿನಲ್ಲಿ ಹಸುಗಳ ಆರೋಗ್ಯದ ಕಡೆಗೂ ರೈತರು ಒತ್ತು ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ಸಂಘಕ್ಕೆ ಅತಿ ಹೆಚ್ಚು ಹಾಲು ಪೂರೈಸಿದ ಸದಸ್ಯರಾದ ಸದಸ್ಯರಾದ ಚಿಕ್ಕೇಗೌಡ, ನಾಗರಾಜು, ಗಂಗರಾಜು, ಶಶಿಕುಮಾರ್, ಸರಸ್ವತಿ ಹಾಗೂ ಸಂಘದ ನಿರ್ದೇಶಕರೂ ಆಗಿರುವ ಗ್ರಾಮ ಪಂಚಾಯತಿ ಸದಸ್ಯ ಎ.ಬಿ. ಗಂಗಾಧರ್ ಗೌಡ ಅವರನ್ನು ಸನ್ಮಾನಿಸಲಾಯಿತು. ಸಂಘದ ನಿರ್ದೇಶಕ ಎ.ಆರ್. ತ್ರಿಮೂರ್ತಿ ಅತಿಥಿಗಳನ್ನು ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>