ನಗರದ ರಾಮದೇವರ ಬೆಟ್ಟಕ್ಕೆ ಶುಕ್ರವಾರ ಭೇಟಿ ನೀಡಿ ಪಟ್ಟಾಭಿರಾಮ ದೇವರಿಗೆ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಂದೆ ಸರ್ಕಾರದ ವತಿಯಿಂದ ವಿಧಾನ ಪರಿಷತ್ ಗೆ ನಾಮ ನಿರ್ದೇಶನಗಳು ನಡೆಯಲಿವೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪಕ್ಷದ ವರಿಷ್ಠರು ಯೋಗೇಶ್ವರ್ ಅವರಿಗೆ ಅಧಿಕಾರ ನೀಡಲಿದ್ದಾರೆ ಎಂದರು. ಎಚ್. ವಿಶ್ವನಾಥ್ ಸೇರಿದಂತೆ ಹಲವರಿಗೆ ಎಂಎಲ್ ಸಿ ಟಿಕೆಟ್ ತಪ್ಪಿರುವ ಕುರಿತಂತೆ ಪ್ರತಿಕ್ರಿಯೆ ನೀಡದ ಡಿಸಿಎಂ, ಟಿಕೆಟ್ ತಪ್ಪಿದ ನಂತರ ಸಭೆ ನಡೆಸಿರುವ ಬಗ್ಗೆಯೂ ಮಾಹಿತಿ ಇಲ್ಲ ಎಂದರು.