<p><strong>ರಾಮನಗರ</strong>: ‘ ಸಚಿವ ಅಶ್ವತ್ಥನಾರಾಯಣ ಕರ್ನಾಟಕ ಕಂಡಂತಹ ಅತ್ಯಂತ ಭ್ರಷ್ಟ ರಾಜಕಾರಣಿಗಳಲ್ಲಿ ಒಬ್ಬರು. ಆದರೂ ನಾನು ಬ್ರಾಹ್ಮಣನ ಥರ ಇದ್ದೇನೆ, ಶುದ್ಧ ರಾಜಕಾರಣಿ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟೀಕಿಸಿದರು.</p>.<p>ಕನಕಪುರದಲ್ಲಿ ಬುಧವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ‘ ರಾಜ್ಯಕ್ಕೆ ಅಮಿತ್ ಶಾ ಬಂದರು ಎಂಬ ಕಾರಣಕ್ಕೆ ನಾವು ಅವರನ್ನು ಟಾರ್ಗೆಟ್ ಮಾಡಿಲ್ಲ. ಸತ್ಯ ಜನರ ಮುಂದೆ ಇಟ್ಟಿದ್ದೇವೆ. ನಮ್ಮ ವಿರುದ್ಧ ಏನು ಬೇಕಾದರೂ ತನಿಖೆ ಮಾಡಲಿ. ಅದನ್ನೆಲ್ಲ ಎದುರಿಸಲು ಸಿದ್ಧರಿದ್ದೇವೆ’ ಎಂದರು.</p>.<p>ಓದಿ...<a href="https://www.prajavani.net/karnataka-news/politics-congress-bjp-rahul-gandhi-narendra-modi-prakash-javdekar-social-media-933975.html" target="_blank">ಮೋದಿ ಮಾಧ್ಯಮಗಳ ಮೈಕ್ ಕಂಡರೆ ಎಕೆ–47 ಗನ್ ಕಂಡಂತೆ ಹೆದರುತ್ತಾರೆ: ಕಾಂಗ್ರೆಸ್</a><br /><br />ಬಿಜೆಪಿ ಮಂತ್ರಿಗಳಿಂದಲೇ ಅಶ್ವತ್ಥನಾರಾಯಣ ವಿರುದ್ಧ ಷಡ್ಯಂತ್ರ ನಡದಿದೆ ಎಂಬ ಕುಮಾರಸ್ವಾಮಿ ಆರೋಪಗಳ ಕುರಿತು ಪ್ರತಿಕ್ರಿಯಿಸಿ ‘ ಪಕ್ಕದ ಮನೆಯಲ್ಲಿ ಇದ್ದವರೇ ಕಲ್ಲು ಹೊಡೆಯುವುದು ಸಹಜ. ಬಹುತೇಕ ಸಂದರ್ಭದಲ್ಲಿ ಹತ್ತಿರ ಇದ್ದವರೇ ಮಾಹಿತಿ ನೀಡುತ್ತಾರೆ. ಹೀಗಾಗಿ ಈ ಆರೋಪ ನಿಜ ಇದ್ದರೂ ಇರಬಹುದು’ ಎಂದರು.</p>.<p>‘ಪಿಎಸ್ಐ ಪರೀಕ್ಷೆಯಲ್ಲಿ ನಾಲ್ಕನೇ ರ್ಯಾಂಕ್ ಪಡೆದ ವ್ಯಕ್ತಿಯೊಬ್ಬರಿಗೆ ಪೊಲೀಸರು ವಿಚಾರಣೆಗೆ ನೋಟಿಸ್ ನೀಡಿದ್ದರು. ಆದರೆ ಸಚಿವರ ಸಂಬಂಧಿ ಹೇಳಿದ ನಂತರ ವಿಚಾರಣೆ ಮಾಡದೇ ಕಳುಹಿಸಿದ್ದಾರೆ. ಇದರ ಅರ್ಥ ಏನು?’ ಎಂದು ಶಿವಕುಮಾರ್ ಪ್ರಶ್ನಿಸಿದರು.</p>.<p>‘ ರಾಮನಗರ ಜಿಲ್ಲೆಯ ಮೂರ್ನಾಲ್ಕು ಮಂದಿಯೂ ಪೊಲೀಸ್ ಪರೀಕ್ಷೆಯಲ್ಲಿ ಆಯ್ಕೆಯಾಗಿ ಈಗ ವಿಚಾರಣೆ ಎದುರಿಸುತ್ತಿದ್ದಾರೆ. ಅಂಗಡಿ ತೆರೆದಾಗ ಗ್ರಾಹಕರು ಬರುವುದು ಸಹಜ. ಸರ್ಕಾರ ಭ್ರಷ್ಟಾಚಾರಕ್ಕೆ ಮುಂದಾಗಿದ್ದರಿಂದಲೇ ಕೆಲವರು ನೌಕರಿ ಆಸೆಗೆ ಸಾಲ–ಸೋಲ ಮಾಡಿ ಹಣ ಕೊಟ್ಟು ಈಗ ಸಿಕ್ಕಿಹಾಕಿಕೊಂಡಿದ್ದಾರೆ’ ಎಂದರು.</p>.<p><strong>ಎಸಿಬಿ ತನಿಖೆ ನಡೆಸಿ:</strong> ಕೆಪಿಎಸ್ಸಿ ಅಧ್ಯಕ್ಷ, ಸದಸ್ಯರೂ ಹಣ ಕೊಟ್ಟು ಈ ಹುದ್ದೆ ಪಡೆದುಕೊಂಡಿದ್ದಾರೆ ಎಂದು ಬಿಜೆಪಿ ಶಾಸಕರೊಬ್ಬರು ಹೇಳಿದ್ದಾರೆ. ಆದರೂ ಮುಖ್ಯಮಂತ್ರಿಗಳು ಎಸಿಬಿಯಿಂದ ಇದರ ವಿಚಾರಣೆ ಯಾಕೆ ನಡೆಸಿಲ್ಲ’ ಎಂದು ಪ್ರಶ್ನಿಸಿದ ಡಿಕೆಶಿ, ‘ ಕೆಪಿಎಸ್ಸಿ ಒಂದು ಸ್ವಾಯತ್ಥ ಸಂಸ್ಥೆ. ಇಂತಹ ಸಂಸ್ಥೆ ವಿರುದ್ಧ ಗಂಭೀರ ಆರೋಪ ಬಂದಿದೆ. ಅಧ್ಯಕ್ಷರು ಪ್ರಾಮಾಣಿಕರಾಗಿದ್ದರೆ ತಾವೇ ಎಸಿಬಿಯಲ್ಲಿ ದೂರು ದಾಖಲಿಸಿ ತನಿಖೆ ಎದುರಿಸಬೇಕು. ಸಿದ್ದರಾಮಯ್ಯನವರ ಕಾಲದಲ್ಲಿ ಆಗಿದ್ದರೂ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.</p>.<p>‘ ರಾಮನಗರದಲ್ಲಿ ಯಾರಪ್ಪ ಗಂಡಸು ಎಂದು ನಮ್ಮನ್ನೆಲ್ಲ ಕೇಳಿದ್ದರು. ನಾವೆಲ್ಲ ಹೆಂಗಸರ ಕುಲಕ್ಕೆ ಸೇರಿದವರು. ಸೀರೆ ಕೊಡಿಸಿದರೆ ಉಟ್ಟುಕೊಂಡು ಸುಮ್ಮನಿರುತ್ತೇವೆ. ಬೇಕಿದ್ದರೆ ಬಂದು ಗಂಡಸುತನದ ಪರೀಕ್ಷೆ ನಡೆಸಲಿ’ ಎಂದು ವ್ಯಂಗ್ಯವಾಡಿದರು.</p>.<p>ಇದನ್ನೂ ಓದಿ..<a href="https://www.prajavani.net/district/ramanagara/bjp-ministers-conspiracy-against-ashwath-narayana-says-kumaraswamy-933953.html" itemprop="url">ಅಶ್ವತ್ಥನಾರಾಯಣ ವಿರುದ್ಧ ಬಿಜೆಪಿ ಮಂತ್ರಿಗಳಿಂದಲೇ ಷಡ್ಯಂತ್ರ; ಕುಮಾರಸ್ವಾಮಿ ಆರೋಪ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ‘ ಸಚಿವ ಅಶ್ವತ್ಥನಾರಾಯಣ ಕರ್ನಾಟಕ ಕಂಡಂತಹ ಅತ್ಯಂತ ಭ್ರಷ್ಟ ರಾಜಕಾರಣಿಗಳಲ್ಲಿ ಒಬ್ಬರು. ಆದರೂ ನಾನು ಬ್ರಾಹ್ಮಣನ ಥರ ಇದ್ದೇನೆ, ಶುದ್ಧ ರಾಜಕಾರಣಿ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟೀಕಿಸಿದರು.</p>.<p>ಕನಕಪುರದಲ್ಲಿ ಬುಧವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ‘ ರಾಜ್ಯಕ್ಕೆ ಅಮಿತ್ ಶಾ ಬಂದರು ಎಂಬ ಕಾರಣಕ್ಕೆ ನಾವು ಅವರನ್ನು ಟಾರ್ಗೆಟ್ ಮಾಡಿಲ್ಲ. ಸತ್ಯ ಜನರ ಮುಂದೆ ಇಟ್ಟಿದ್ದೇವೆ. ನಮ್ಮ ವಿರುದ್ಧ ಏನು ಬೇಕಾದರೂ ತನಿಖೆ ಮಾಡಲಿ. ಅದನ್ನೆಲ್ಲ ಎದುರಿಸಲು ಸಿದ್ಧರಿದ್ದೇವೆ’ ಎಂದರು.</p>.<p>ಓದಿ...<a href="https://www.prajavani.net/karnataka-news/politics-congress-bjp-rahul-gandhi-narendra-modi-prakash-javdekar-social-media-933975.html" target="_blank">ಮೋದಿ ಮಾಧ್ಯಮಗಳ ಮೈಕ್ ಕಂಡರೆ ಎಕೆ–47 ಗನ್ ಕಂಡಂತೆ ಹೆದರುತ್ತಾರೆ: ಕಾಂಗ್ರೆಸ್</a><br /><br />ಬಿಜೆಪಿ ಮಂತ್ರಿಗಳಿಂದಲೇ ಅಶ್ವತ್ಥನಾರಾಯಣ ವಿರುದ್ಧ ಷಡ್ಯಂತ್ರ ನಡದಿದೆ ಎಂಬ ಕುಮಾರಸ್ವಾಮಿ ಆರೋಪಗಳ ಕುರಿತು ಪ್ರತಿಕ್ರಿಯಿಸಿ ‘ ಪಕ್ಕದ ಮನೆಯಲ್ಲಿ ಇದ್ದವರೇ ಕಲ್ಲು ಹೊಡೆಯುವುದು ಸಹಜ. ಬಹುತೇಕ ಸಂದರ್ಭದಲ್ಲಿ ಹತ್ತಿರ ಇದ್ದವರೇ ಮಾಹಿತಿ ನೀಡುತ್ತಾರೆ. ಹೀಗಾಗಿ ಈ ಆರೋಪ ನಿಜ ಇದ್ದರೂ ಇರಬಹುದು’ ಎಂದರು.</p>.<p>‘ಪಿಎಸ್ಐ ಪರೀಕ್ಷೆಯಲ್ಲಿ ನಾಲ್ಕನೇ ರ್ಯಾಂಕ್ ಪಡೆದ ವ್ಯಕ್ತಿಯೊಬ್ಬರಿಗೆ ಪೊಲೀಸರು ವಿಚಾರಣೆಗೆ ನೋಟಿಸ್ ನೀಡಿದ್ದರು. ಆದರೆ ಸಚಿವರ ಸಂಬಂಧಿ ಹೇಳಿದ ನಂತರ ವಿಚಾರಣೆ ಮಾಡದೇ ಕಳುಹಿಸಿದ್ದಾರೆ. ಇದರ ಅರ್ಥ ಏನು?’ ಎಂದು ಶಿವಕುಮಾರ್ ಪ್ರಶ್ನಿಸಿದರು.</p>.<p>‘ ರಾಮನಗರ ಜಿಲ್ಲೆಯ ಮೂರ್ನಾಲ್ಕು ಮಂದಿಯೂ ಪೊಲೀಸ್ ಪರೀಕ್ಷೆಯಲ್ಲಿ ಆಯ್ಕೆಯಾಗಿ ಈಗ ವಿಚಾರಣೆ ಎದುರಿಸುತ್ತಿದ್ದಾರೆ. ಅಂಗಡಿ ತೆರೆದಾಗ ಗ್ರಾಹಕರು ಬರುವುದು ಸಹಜ. ಸರ್ಕಾರ ಭ್ರಷ್ಟಾಚಾರಕ್ಕೆ ಮುಂದಾಗಿದ್ದರಿಂದಲೇ ಕೆಲವರು ನೌಕರಿ ಆಸೆಗೆ ಸಾಲ–ಸೋಲ ಮಾಡಿ ಹಣ ಕೊಟ್ಟು ಈಗ ಸಿಕ್ಕಿಹಾಕಿಕೊಂಡಿದ್ದಾರೆ’ ಎಂದರು.</p>.<p><strong>ಎಸಿಬಿ ತನಿಖೆ ನಡೆಸಿ:</strong> ಕೆಪಿಎಸ್ಸಿ ಅಧ್ಯಕ್ಷ, ಸದಸ್ಯರೂ ಹಣ ಕೊಟ್ಟು ಈ ಹುದ್ದೆ ಪಡೆದುಕೊಂಡಿದ್ದಾರೆ ಎಂದು ಬಿಜೆಪಿ ಶಾಸಕರೊಬ್ಬರು ಹೇಳಿದ್ದಾರೆ. ಆದರೂ ಮುಖ್ಯಮಂತ್ರಿಗಳು ಎಸಿಬಿಯಿಂದ ಇದರ ವಿಚಾರಣೆ ಯಾಕೆ ನಡೆಸಿಲ್ಲ’ ಎಂದು ಪ್ರಶ್ನಿಸಿದ ಡಿಕೆಶಿ, ‘ ಕೆಪಿಎಸ್ಸಿ ಒಂದು ಸ್ವಾಯತ್ಥ ಸಂಸ್ಥೆ. ಇಂತಹ ಸಂಸ್ಥೆ ವಿರುದ್ಧ ಗಂಭೀರ ಆರೋಪ ಬಂದಿದೆ. ಅಧ್ಯಕ್ಷರು ಪ್ರಾಮಾಣಿಕರಾಗಿದ್ದರೆ ತಾವೇ ಎಸಿಬಿಯಲ್ಲಿ ದೂರು ದಾಖಲಿಸಿ ತನಿಖೆ ಎದುರಿಸಬೇಕು. ಸಿದ್ದರಾಮಯ್ಯನವರ ಕಾಲದಲ್ಲಿ ಆಗಿದ್ದರೂ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.</p>.<p>‘ ರಾಮನಗರದಲ್ಲಿ ಯಾರಪ್ಪ ಗಂಡಸು ಎಂದು ನಮ್ಮನ್ನೆಲ್ಲ ಕೇಳಿದ್ದರು. ನಾವೆಲ್ಲ ಹೆಂಗಸರ ಕುಲಕ್ಕೆ ಸೇರಿದವರು. ಸೀರೆ ಕೊಡಿಸಿದರೆ ಉಟ್ಟುಕೊಂಡು ಸುಮ್ಮನಿರುತ್ತೇವೆ. ಬೇಕಿದ್ದರೆ ಬಂದು ಗಂಡಸುತನದ ಪರೀಕ್ಷೆ ನಡೆಸಲಿ’ ಎಂದು ವ್ಯಂಗ್ಯವಾಡಿದರು.</p>.<p>ಇದನ್ನೂ ಓದಿ..<a href="https://www.prajavani.net/district/ramanagara/bjp-ministers-conspiracy-against-ashwath-narayana-says-kumaraswamy-933953.html" itemprop="url">ಅಶ್ವತ್ಥನಾರಾಯಣ ವಿರುದ್ಧ ಬಿಜೆಪಿ ಮಂತ್ರಿಗಳಿಂದಲೇ ಷಡ್ಯಂತ್ರ; ಕುಮಾರಸ್ವಾಮಿ ಆರೋಪ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>