<p>ಕನಕಪುರ: ‘ಕೊರೊನಾ ಸೋಂಕಿನಿಂದ ಸಮಾಜ ಇನ್ನೂ ಮುಕ್ತವಾಗಿಲ್ಲ. ಸಮಾಜವನ್ನು ಕೊರೊನಾದಿಂದ ಮುಕ್ತವಾಗಿಸಲು ನಾವೆಲ್ಲಾ ಜವಾಬ್ದಾರಿಯಿಂದ ಕೆಲಸ ಮಾಡಬೇಕಿದೆ’ ಎಂದು ಕನಕಪುರ ರೋಟರಿ ಸಂಸ್ಥೆಯ ಗೌರವಾಧ್ಯಕ್ಷ ಎಂ.ಡಿ. ವಿಜಯದೇವು ತಿಳಿಸಿದರು.</p>.<p>ಇಲ್ಲಿನ ರೋಟರಿ ಭವನದಲ್ಲಿ ಕನಕಪುರ ರೋಟರಿ ಸಂಸ್ಥೆಯಿಂದ ತಾಲ್ಲೂಕಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ತೆಗೆದುಕೊಂಡಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಎನ್-95 ಮಾಸ್ಕ್ ಮತ್ತು 26 ಪಲ್ಸ್ ಆಕ್ಸಿಮೀಟರ್ ವಿತರಿಸಿ ಅವರು ಮಾತನಾಡಿದರು.</p>.<p>ಕೊರೊನಾ ಎರಡನೇ ಅಲೆಯು ಸಮಾಜದ ಮೇಲೆ ಭೀಕರ ಪರೀಣಾಮ ಬೀರಿದೆ. ಸಾಕಷ್ಟು ಉದ್ಯಮಗಳಿಗೂ ಪೆಟ್ಟು ನೀಡಿದೆ. ಶಿಕ್ಷಣ ವ್ಯವಸ್ಥೆ ಮೇಲೆ ಕರಿನೆರಳು ಆವರಿಸಿದೆ. ಆರ್ಥಿಕ ಪ್ರಗತಿ ಯ ಹಿನ್ನಡೆಯಿಂದ ದೇಶ ಸುಮಾರು ವರ್ಷಗಳಷ್ಟು ಹಿಂದಕ್ಕೆ ಹೋಗಿದೆ ಎಂದು ಹೇಳಿದರು.</p>.<p>ರೋಟರಿ ಅಧ್ಯಕ್ಷ ಆನಮಾನಹಳ್ಳಿ ನಟೇಶ್ ಮಾತನಾಡಿ, ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು 2,250 ವಿದ್ಯಾರ್ಥಿಗಳಿಗೆ ₹ 50 ಬೆಲೆಯ ಎನ್-95 ಮಾಸ್ಕ್ಗಳನ್ನು₹ 2 ಲಕ್ಷ ವೆಚ್ಚದಲ್ಲಿ ಖರೀದಿಸಿ ಕೊಡಲಾಗುತ್ತಿದೆ. ಮುಂದೆಯು ಇಂತಹ ಸೇವಾ ಕಾರ್ಯ ಮಾಡಲಾಗುವುದು ಎಂದು ತಿಳಿಸಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಜೆ.ಎಂ. ಜಯಲಕ್ಷ್ಮಿ, ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಟಿ.ವಿ.ಎನ್. ಪ್ರಸಾದ್, ರೋಟರಿ ಮಾಜಿ ಅಧ್ಯಕ್ಷ ಭಾನುಪ್ರಕಾಶ್, ಕಾರ್ಯದರ್ಶಿ ಸಂತೋಷ್, ಪದಾಧಿಕಾರಿಗಳಾದ ಗವಿರಾಜು, ರಂಜನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ‘ಕೊರೊನಾ ಸೋಂಕಿನಿಂದ ಸಮಾಜ ಇನ್ನೂ ಮುಕ್ತವಾಗಿಲ್ಲ. ಸಮಾಜವನ್ನು ಕೊರೊನಾದಿಂದ ಮುಕ್ತವಾಗಿಸಲು ನಾವೆಲ್ಲಾ ಜವಾಬ್ದಾರಿಯಿಂದ ಕೆಲಸ ಮಾಡಬೇಕಿದೆ’ ಎಂದು ಕನಕಪುರ ರೋಟರಿ ಸಂಸ್ಥೆಯ ಗೌರವಾಧ್ಯಕ್ಷ ಎಂ.ಡಿ. ವಿಜಯದೇವು ತಿಳಿಸಿದರು.</p>.<p>ಇಲ್ಲಿನ ರೋಟರಿ ಭವನದಲ್ಲಿ ಕನಕಪುರ ರೋಟರಿ ಸಂಸ್ಥೆಯಿಂದ ತಾಲ್ಲೂಕಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ತೆಗೆದುಕೊಂಡಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಎನ್-95 ಮಾಸ್ಕ್ ಮತ್ತು 26 ಪಲ್ಸ್ ಆಕ್ಸಿಮೀಟರ್ ವಿತರಿಸಿ ಅವರು ಮಾತನಾಡಿದರು.</p>.<p>ಕೊರೊನಾ ಎರಡನೇ ಅಲೆಯು ಸಮಾಜದ ಮೇಲೆ ಭೀಕರ ಪರೀಣಾಮ ಬೀರಿದೆ. ಸಾಕಷ್ಟು ಉದ್ಯಮಗಳಿಗೂ ಪೆಟ್ಟು ನೀಡಿದೆ. ಶಿಕ್ಷಣ ವ್ಯವಸ್ಥೆ ಮೇಲೆ ಕರಿನೆರಳು ಆವರಿಸಿದೆ. ಆರ್ಥಿಕ ಪ್ರಗತಿ ಯ ಹಿನ್ನಡೆಯಿಂದ ದೇಶ ಸುಮಾರು ವರ್ಷಗಳಷ್ಟು ಹಿಂದಕ್ಕೆ ಹೋಗಿದೆ ಎಂದು ಹೇಳಿದರು.</p>.<p>ರೋಟರಿ ಅಧ್ಯಕ್ಷ ಆನಮಾನಹಳ್ಳಿ ನಟೇಶ್ ಮಾತನಾಡಿ, ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು 2,250 ವಿದ್ಯಾರ್ಥಿಗಳಿಗೆ ₹ 50 ಬೆಲೆಯ ಎನ್-95 ಮಾಸ್ಕ್ಗಳನ್ನು₹ 2 ಲಕ್ಷ ವೆಚ್ಚದಲ್ಲಿ ಖರೀದಿಸಿ ಕೊಡಲಾಗುತ್ತಿದೆ. ಮುಂದೆಯು ಇಂತಹ ಸೇವಾ ಕಾರ್ಯ ಮಾಡಲಾಗುವುದು ಎಂದು ತಿಳಿಸಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಜೆ.ಎಂ. ಜಯಲಕ್ಷ್ಮಿ, ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಟಿ.ವಿ.ಎನ್. ಪ್ರಸಾದ್, ರೋಟರಿ ಮಾಜಿ ಅಧ್ಯಕ್ಷ ಭಾನುಪ್ರಕಾಶ್, ಕಾರ್ಯದರ್ಶಿ ಸಂತೋಷ್, ಪದಾಧಿಕಾರಿಗಳಾದ ಗವಿರಾಜು, ರಂಜನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>