ಸೋಮವಾರ ಮಹಾಲಯ ಅಮಾವಾಸ್ಯೆ ಕಾರಣ ಭಕ್ತರು ಹೆಚ್ಚಿದ್ದು, ವಿಜಯಲಕ್ಷ್ಮಿ ಅವರು ದೇವಸ್ಥಾನ ಪ್ರದಕ್ಷಿಣೆ ಹಾಕಲು ಹೋಗಿದ್ದರು. ಯುವತಿಯ ಮೇಲೆ ಹಲ್ಲೆ ನಡೆಸಿ ಬಾಯಿಗೆ ಬಂದಂತೆ ಬೈದು ಕಾರು ಹತ್ತಿ ಹೋಗುತ್ತಿದ್ದ ವಿಜಯಲಕ್ಷ್ಮಿ ಅವರನ್ನು ಅಡ್ಡಗಟ್ಟಿದ ಸಾರ್ವಜನಿಕರು ಅವರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ಕಾರಿಗೆ ಕಲ್ಲಿನಿಂದ ಹೊಡೆದು ಗಾಜು ಪುಡಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.