ರಾಮನಗರದ ಐಜೂರು ವೃತ್ತದಲ್ಲಿ ರಾಮನಗರ ಜಿಲ್ಲಾ ಲೋಕಾಯುಕ್ತ ಮತ್ತು ಜಿಲ್ಲಾ ನ್ಯಾಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ‘ಅರಿವು ಸಪ್ತಾಹ– 2023’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಲೋಕಾಯುಕ್ತ ಸಿಬ್ಬಂದಿ ಜಾಗೃತಿ ಜಾಥಾ ನಡೆಸಿದರು
ರಸ್ತೆಯಲ್ಲಿ ಜಾಗೃತಿ ಜಾಥಾ: ರಾಮನಗರದ ಐಜೂರು ವೃತ್ತದಲ್ಲಿ ರಾಮನಗರ ಜಿಲ್ಲಾ ಲೋಕಾಯುಕ್ತ ಮತ್ತು ಜಿಲ್ಲಾ ನ್ಯಾಯಾಲಯದ ವತಿಯಿಂದ ‘ಜಾಗೃತಿ ಅರಿವು ಸಪ್ತಾಹ– 2023’ ಅಂಗವಾಗಿ ರಸ್ತೆ ಜಾಥಾ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಎನ್.ಪಿ. ಕೋಪರ್ಡೆ ಮತ್ತು ಲೋಕಾಯುಕ್ತ ಅಧೀಕ್ಷಕ ಕ್ಯಾಪ್ಟನ್ ಅಯ್ಯಪ್ಪ ಜಾಥಾಗೆ ಚಾಲನೆ ನೀಡಿದರು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿ ಭ್ರಷ್ಟಾಚಾರ ವಿರೋಧಿ ಘೋಷಣೆಗಳನ್ನು ಕೂಗಿದರು.