<p>ಚನ್ನಪಟ್ಟಣ: ‘ಕೋವಿಡ್ ಮೂರನೇ ಅಲೆ ಮಕ್ಕಳಿಗೆ ಹರಡುವ ವಿಚಾರ ಜನಮಾನಸದಲ್ಲಿ ಭೀತಿ ಹುಟ್ಟಿಸಿದ್ದು, ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಾಗಿರುವುದು ಅವಶ್ಯಕವಾಗಿದೆ’ ಎಂದು ರೋಟರಿ ಸಂಸ್ಥೆ ನೂತನ ಅಧ್ಯಕ್ಷ ಎಂ.ಕೆ. ನಿಂಗಪ್ಪ ಹೇಳಿದರು.</p>.<p>ಪಟ್ಟಣದ ರೋಟರಿ ಭವನದಲ್ಲಿ ಶನಿವಾರ ನಡೆದ ನೂತನ ಪದಾಧಿ ಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿ<br />ಮಾತನಾಡಿದರು.</p>.<p>ಪರಿಸರ ಕಾಳಜಿಯ ಭಾಗವಾಗಿ ಗಿಡ ನೆಡುವ ಕಾರ್ಯಕ್ರಮ, ಶಾಲಾ ಹಂತದಲ್ಲಿ ಮಕ್ಕಳಿಗೆ ಪರಿಸರದ ಬಗ್ಗೆ ಉಪನ್ಯಾಸ, ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿವುದು, ಕ್ರೀಡೆಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವ ಕಾರ್ಯಕ್ರಮ ರೂಪಿಸಲಾಗುವುದು ಎಂದರು.</p>.<p>ಡಿವೈಎಸ್ಪಿ ರಮೇಶ್ ಮಾತನಾಡಿ, ಇಂದಿನ ದಿನಗಳಲ್ಲಿ ಪರಿಸರ ಅಸಮತೋಲನಕ್ಕೆ ನಾವೇ ಕಾರಣರಾಗಿದ್ದೇವೆ. ಅದನ್ನು ಸರಿಪಡಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ ಎಂದು ಹೇಳಿದರು.</p>.<p>ನಗರ ಪ್ರದೇಶದಲ್ಲಿ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಬೇಕು. ಹಾಗೆಯೇ ಹಸಿರೀಕರಣಗೊಳಿಸುವ ಕೆಲಸವೂ ಆಗಬೇಕು. ಸಮಾಜಕ್ಕೆ ಅವಶ್ಯವಿರುವ ಎಲ್ಲ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಬೇಕು. ಈ ನಿಟ್ಟಿನಲ್ಲಿ ರೋಟರಿ ಸಂಸ್ಥೆ ಕಾರ್ಯೋನ್ಮುಖವಾಗಬೇಕು ಎಂದು ಸಲಹೆ ನೀಡಿದರು.</p>.<p>ರೋಟರಿ ಸಂಸ್ಥೆ ವಲಯ ಗೌವರ್ನರ್ ಹೊನ್ನೇಗೌಡ ಮಾತನಾಡಿ, ನೂತನ ಪದಾಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಉತ್ತಮವಾಗಿ ಕಾರ್ಯ ನಿರ್ವಹಿಸಬೇಕು. ಸಮಾಜಕ್ಕೆ ಸೇವೆ ಸಲ್ಲಿಸುವುದು ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದರು.</p>.<p>ನಿರ್ಗಮಿತ ಅಧ್ಯಕ್ಷ ಹೇಮುಕುಮಾರ್ ನೂತನ ಅಧ್ಯಕ್ಷ ನಿಂಗಪ್ಪಗೆ ಅಧಿಕಾರ ಹಸ್ತಾಂತರಿಸಿದರು. ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ರೋಟರಿ ಸಹ ಗೌವರ್ನರ್ ಪ್ರಶಾಂತ್, ಕಾರ್ಯದರ್ಶಿ ಎನ್. ಗಣೇಶ್, ವಿನುತಾ ನಿಂಗಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಪಟ್ಟಣ: ‘ಕೋವಿಡ್ ಮೂರನೇ ಅಲೆ ಮಕ್ಕಳಿಗೆ ಹರಡುವ ವಿಚಾರ ಜನಮಾನಸದಲ್ಲಿ ಭೀತಿ ಹುಟ್ಟಿಸಿದ್ದು, ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಾಗಿರುವುದು ಅವಶ್ಯಕವಾಗಿದೆ’ ಎಂದು ರೋಟರಿ ಸಂಸ್ಥೆ ನೂತನ ಅಧ್ಯಕ್ಷ ಎಂ.ಕೆ. ನಿಂಗಪ್ಪ ಹೇಳಿದರು.</p>.<p>ಪಟ್ಟಣದ ರೋಟರಿ ಭವನದಲ್ಲಿ ಶನಿವಾರ ನಡೆದ ನೂತನ ಪದಾಧಿ ಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿ<br />ಮಾತನಾಡಿದರು.</p>.<p>ಪರಿಸರ ಕಾಳಜಿಯ ಭಾಗವಾಗಿ ಗಿಡ ನೆಡುವ ಕಾರ್ಯಕ್ರಮ, ಶಾಲಾ ಹಂತದಲ್ಲಿ ಮಕ್ಕಳಿಗೆ ಪರಿಸರದ ಬಗ್ಗೆ ಉಪನ್ಯಾಸ, ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿವುದು, ಕ್ರೀಡೆಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವ ಕಾರ್ಯಕ್ರಮ ರೂಪಿಸಲಾಗುವುದು ಎಂದರು.</p>.<p>ಡಿವೈಎಸ್ಪಿ ರಮೇಶ್ ಮಾತನಾಡಿ, ಇಂದಿನ ದಿನಗಳಲ್ಲಿ ಪರಿಸರ ಅಸಮತೋಲನಕ್ಕೆ ನಾವೇ ಕಾರಣರಾಗಿದ್ದೇವೆ. ಅದನ್ನು ಸರಿಪಡಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ ಎಂದು ಹೇಳಿದರು.</p>.<p>ನಗರ ಪ್ರದೇಶದಲ್ಲಿ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಬೇಕು. ಹಾಗೆಯೇ ಹಸಿರೀಕರಣಗೊಳಿಸುವ ಕೆಲಸವೂ ಆಗಬೇಕು. ಸಮಾಜಕ್ಕೆ ಅವಶ್ಯವಿರುವ ಎಲ್ಲ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಬೇಕು. ಈ ನಿಟ್ಟಿನಲ್ಲಿ ರೋಟರಿ ಸಂಸ್ಥೆ ಕಾರ್ಯೋನ್ಮುಖವಾಗಬೇಕು ಎಂದು ಸಲಹೆ ನೀಡಿದರು.</p>.<p>ರೋಟರಿ ಸಂಸ್ಥೆ ವಲಯ ಗೌವರ್ನರ್ ಹೊನ್ನೇಗೌಡ ಮಾತನಾಡಿ, ನೂತನ ಪದಾಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಉತ್ತಮವಾಗಿ ಕಾರ್ಯ ನಿರ್ವಹಿಸಬೇಕು. ಸಮಾಜಕ್ಕೆ ಸೇವೆ ಸಲ್ಲಿಸುವುದು ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದರು.</p>.<p>ನಿರ್ಗಮಿತ ಅಧ್ಯಕ್ಷ ಹೇಮುಕುಮಾರ್ ನೂತನ ಅಧ್ಯಕ್ಷ ನಿಂಗಪ್ಪಗೆ ಅಧಿಕಾರ ಹಸ್ತಾಂತರಿಸಿದರು. ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ರೋಟರಿ ಸಹ ಗೌವರ್ನರ್ ಪ್ರಶಾಂತ್, ಕಾರ್ಯದರ್ಶಿ ಎನ್. ಗಣೇಶ್, ವಿನುತಾ ನಿಂಗಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>