ಸಭೆ, ಸಮಾರಂಭ, ಕಾರ್ಯಕ್ರಮಗಳಿಗಿಂತ ಬದುಕು ಮತ್ತು ಆರೋಗ್ಯ ಮುಖ್ಯ. ನಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕಿದೆ. ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ನಗರ ಪ್ರದೇಶದಂತೆ ಗ್ರಾಮೀಣ ಪ್ರದೇಶಗಳಲ್ಲೂ ಹರಡುತ್ತಿದೆ. ಇದರಿಂದ ತಪ್ಪಿಸಿಕೊಳ್ಳಲು ಲಸಿಕೆ ಹಾಕಿಸಿಕೊಳ್ಳುವುದು, ಕೊರೊನಾ ನಿಯಮ ಪಾಲನೆ ಮಾಡುವುದೊಂದೇ ಪರಿಹಾರ ಎಂದರು.