<p><strong>ಕನಕಪುರ:</strong> ನಗರದ ತಾಲ್ಲೂಕು ಕಚೇರಿಯ ತಹಶೀಲ್ದಾರ್ ಸಭಾಂಗಣದಲ್ಲಿ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರ ಅಧ್ಯಕ್ಷತೆಯಲ್ಲಿ ಬಗರ್ ಹುಕುಂ ಸಾಗುವಳಿ ಸಮಿತಿಯ ಸಭೆ ಗುರುವಾರ ನಡೆಯಿತು.</p>.<p>ಸಭೆಯಲ್ಲಿ ಡಿ.ಕೆ.ಸುರೇಶ್ ಅವರು ಉಪ ವಿಭಾಗಾಧಿಕಾರಿ ಬಿನೊಯ್, ವಿಶೇಷ ಭೂ ಸ್ವಾಧೀನಾಧಿಕಾರಿ ವಿಶ್ವನಾಥ್, ತಹಶೀಲ್ದಾರ್ ಮಂಜುನಾಥ್ ಜಿ, ಎಡಿಎಲ್ ಆರ್.ನಂದೀಶ್, ಇಒ ಅವಿನಾಶ್ ಅವರೊಂದಿಗೆ ತಾಲ್ಲೂಕಿನಲ್ಲಿ ಸಲ್ಲಿಕೆಯಾಗಿರುವ ಸಾಗುವಳಿ ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿ ಚರ್ಚೆ ನಡೆಸಿದರು.</p>.<p>ಜುಲೈ 21 ರಂದು ಕೋಡಿಹಳ್ಳಿಯಲ್ಲಿ 22 ರಂದು ಕಸಬಾ ಹೋಬಳಿಯಲ್ಲಿ ನಡೆಯುವ ಜನಸಂಪರ್ಕ ಸಭೆಯ ಪೂರ್ವಸಿದ್ಧತೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.</p>.<p>ಈ ವೇಳೆ ಸಾರ್ವಜನಿಕರು ಬಗರ್ ಹುಕುಂ ಸಾಗುವಳಿ, ಸರ್ವೆ ಸೇರಿದಂತೆ ಇತರೆ ಸಮಸ್ಯೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಡಿ.ಕೆ.ಸುರೇಶ್ ಅವರಿಗೆ ಸಲ್ಲಿಸಿದರು. ಡಿ.ಕೆ.ಸುರೇಶ್ ಅವರು ಅರ್ಜಿಗಳನ್ನು ಪರಿಶೀಲಿಸಿ ಅವುಗಳಿಗೆ ಪರಿಹಾರ ಸೂಚಿಸುವಂತೆ ತಹಶೀಲ್ದಾರ್, ಇಒ ಮತ್ತು ಸರ್ವೆ ಅಧಿಕಾರಿಗಳಿಗೆ ಅರ್ಜಿಗಳನ್ನು ಹಸ್ತಾಂತರಿಸಿದರು.</p>.<p>ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಬಗರ್ ಹುಕುಂ ಸಾಗುವಳಿ ಸಮಿತಿ ಸದಸ್ಯರು, ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ನಗರದ ತಾಲ್ಲೂಕು ಕಚೇರಿಯ ತಹಶೀಲ್ದಾರ್ ಸಭಾಂಗಣದಲ್ಲಿ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರ ಅಧ್ಯಕ್ಷತೆಯಲ್ಲಿ ಬಗರ್ ಹುಕುಂ ಸಾಗುವಳಿ ಸಮಿತಿಯ ಸಭೆ ಗುರುವಾರ ನಡೆಯಿತು.</p>.<p>ಸಭೆಯಲ್ಲಿ ಡಿ.ಕೆ.ಸುರೇಶ್ ಅವರು ಉಪ ವಿಭಾಗಾಧಿಕಾರಿ ಬಿನೊಯ್, ವಿಶೇಷ ಭೂ ಸ್ವಾಧೀನಾಧಿಕಾರಿ ವಿಶ್ವನಾಥ್, ತಹಶೀಲ್ದಾರ್ ಮಂಜುನಾಥ್ ಜಿ, ಎಡಿಎಲ್ ಆರ್.ನಂದೀಶ್, ಇಒ ಅವಿನಾಶ್ ಅವರೊಂದಿಗೆ ತಾಲ್ಲೂಕಿನಲ್ಲಿ ಸಲ್ಲಿಕೆಯಾಗಿರುವ ಸಾಗುವಳಿ ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿ ಚರ್ಚೆ ನಡೆಸಿದರು.</p>.<p>ಜುಲೈ 21 ರಂದು ಕೋಡಿಹಳ್ಳಿಯಲ್ಲಿ 22 ರಂದು ಕಸಬಾ ಹೋಬಳಿಯಲ್ಲಿ ನಡೆಯುವ ಜನಸಂಪರ್ಕ ಸಭೆಯ ಪೂರ್ವಸಿದ್ಧತೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.</p>.<p>ಈ ವೇಳೆ ಸಾರ್ವಜನಿಕರು ಬಗರ್ ಹುಕುಂ ಸಾಗುವಳಿ, ಸರ್ವೆ ಸೇರಿದಂತೆ ಇತರೆ ಸಮಸ್ಯೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಡಿ.ಕೆ.ಸುರೇಶ್ ಅವರಿಗೆ ಸಲ್ಲಿಸಿದರು. ಡಿ.ಕೆ.ಸುರೇಶ್ ಅವರು ಅರ್ಜಿಗಳನ್ನು ಪರಿಶೀಲಿಸಿ ಅವುಗಳಿಗೆ ಪರಿಹಾರ ಸೂಚಿಸುವಂತೆ ತಹಶೀಲ್ದಾರ್, ಇಒ ಮತ್ತು ಸರ್ವೆ ಅಧಿಕಾರಿಗಳಿಗೆ ಅರ್ಜಿಗಳನ್ನು ಹಸ್ತಾಂತರಿಸಿದರು.</p>.<p>ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಬಗರ್ ಹುಕುಂ ಸಾಗುವಳಿ ಸಮಿತಿ ಸದಸ್ಯರು, ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>