<p><strong>ಚನ್ನಪಟ್ಟಣ</strong>: ತಾಲ್ಲೂಕಿನ ಅಬ್ಬೂರುದೊಡ್ಡಿಯಲ್ಲಿ ಅತ್ತೆಯನ್ನು ಸೊಸೆ ಅಮಾನವೀಯವಾಗಿ ಥಳಿಸಿದ ಘಟನೆಗೆ ಸಂಬಂಧಿಸಿದಂತೆ, ಸೊಸೆ ಸಂಜನಾ ಹಾಗೂ ಮಗ ರವೀಂದ್ರನನ್ನು ಚನ್ನಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ, ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇಬ್ಬರಿಗೂ ಎಚ್ಚರಿಕೆ ನೀಡಿದ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.</p>.<p>ಅತ್ತೆ ಶಾಂತಮ್ಮ ಮತ್ತು ಸೊಸೆ ಸಂಜನಾ ನಡುವೆ ಮನೆಯಲ್ಲಿ ಆಗಾಗ ಜಗಳವಾಗುತ್ತಿತ್ತು. ಇದೇ ಕಾರಣಕ್ಕೆ ಕೆಲ ದಿನ ತವರು ಮನೆಗೆ ಹೋಗಿದ್ದ ಶಾಂತಮ್ಮ, ಏಪ್ರಿಲ್ 19ರಂದು ಮನೆಗೆ ವಾಪಸ್ಸಾಗಿದ್ದರು. ಆಗ ಅತ್ತೆಯೊಂದಿಗೆ ಜಗಳ ತೆಗೆದಿದ್ದ ಸಂಜನಾ, ದೊಣ್ಣೆಯಿಂದ ಹೊಡೆದಿದ್ದಳು. ಆ ದೃಶ್ಯವನ್ನು ಮಗ ರವೀಂದ್ರ ತನ್ನ ಮೊಬೈಲ್ನಲ್ಲಿ ವಿಡಿಯೊ ಮಾಡಿ, ಸಂಬಂಧಿಕರೊಂದಿಗೆ ಹಂಚಿಕೊಂಡಿದ್ದ.</p>.ಚನ್ನಪಟ್ಟಣ | ಅತ್ತೆಗೆ ಥಳಿಸಿ ಕ್ರೌರ್ಯ ಮೆರೆದ ಸೊಸೆ; ವಿಡಿಯೊ ಚಿತ್ರೀಕರಿಸಿದ ಮಗ.<p>ಸಾಮಾಜಿಕ ಜಾಲತಾಣ ವಾಟ್ಸ್ಆ್ಯಪ್ನಲ್ಲಿ ಹರಿದಾಡಿದ್ದ ವಿಡಿಯೊ ವೈರಲ್ ಆಗಿತ್ತು. ಹಲ್ಲೆ ನಡೆಸಿದ ಸೊಸೆ ಮತ್ತು ಚಿತ್ರೀಕರಿಸಿದ ಮಗನ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಹೊಸದುರ್ಗ ಎಂಬುವರು ಠಾಣೆಗೆ ದೂರು ಕೊಟ್ಟಿದ್ದರು. ಆ ಮೇರೆಗೆ, ಪೊಲೀಸರು ಇಬ್ಬರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಧೀಶರು ಇಬ್ಬರಿಗೂ ಬುದ್ಧಿಮಾತು ಹೇಳಿ ಜಾಮೀನು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ತಾಲ್ಲೂಕಿನ ಅಬ್ಬೂರುದೊಡ್ಡಿಯಲ್ಲಿ ಅತ್ತೆಯನ್ನು ಸೊಸೆ ಅಮಾನವೀಯವಾಗಿ ಥಳಿಸಿದ ಘಟನೆಗೆ ಸಂಬಂಧಿಸಿದಂತೆ, ಸೊಸೆ ಸಂಜನಾ ಹಾಗೂ ಮಗ ರವೀಂದ್ರನನ್ನು ಚನ್ನಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ, ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇಬ್ಬರಿಗೂ ಎಚ್ಚರಿಕೆ ನೀಡಿದ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.</p>.<p>ಅತ್ತೆ ಶಾಂತಮ್ಮ ಮತ್ತು ಸೊಸೆ ಸಂಜನಾ ನಡುವೆ ಮನೆಯಲ್ಲಿ ಆಗಾಗ ಜಗಳವಾಗುತ್ತಿತ್ತು. ಇದೇ ಕಾರಣಕ್ಕೆ ಕೆಲ ದಿನ ತವರು ಮನೆಗೆ ಹೋಗಿದ್ದ ಶಾಂತಮ್ಮ, ಏಪ್ರಿಲ್ 19ರಂದು ಮನೆಗೆ ವಾಪಸ್ಸಾಗಿದ್ದರು. ಆಗ ಅತ್ತೆಯೊಂದಿಗೆ ಜಗಳ ತೆಗೆದಿದ್ದ ಸಂಜನಾ, ದೊಣ್ಣೆಯಿಂದ ಹೊಡೆದಿದ್ದಳು. ಆ ದೃಶ್ಯವನ್ನು ಮಗ ರವೀಂದ್ರ ತನ್ನ ಮೊಬೈಲ್ನಲ್ಲಿ ವಿಡಿಯೊ ಮಾಡಿ, ಸಂಬಂಧಿಕರೊಂದಿಗೆ ಹಂಚಿಕೊಂಡಿದ್ದ.</p>.ಚನ್ನಪಟ್ಟಣ | ಅತ್ತೆಗೆ ಥಳಿಸಿ ಕ್ರೌರ್ಯ ಮೆರೆದ ಸೊಸೆ; ವಿಡಿಯೊ ಚಿತ್ರೀಕರಿಸಿದ ಮಗ.<p>ಸಾಮಾಜಿಕ ಜಾಲತಾಣ ವಾಟ್ಸ್ಆ್ಯಪ್ನಲ್ಲಿ ಹರಿದಾಡಿದ್ದ ವಿಡಿಯೊ ವೈರಲ್ ಆಗಿತ್ತು. ಹಲ್ಲೆ ನಡೆಸಿದ ಸೊಸೆ ಮತ್ತು ಚಿತ್ರೀಕರಿಸಿದ ಮಗನ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಹೊಸದುರ್ಗ ಎಂಬುವರು ಠಾಣೆಗೆ ದೂರು ಕೊಟ್ಟಿದ್ದರು. ಆ ಮೇರೆಗೆ, ಪೊಲೀಸರು ಇಬ್ಬರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಧೀಶರು ಇಬ್ಬರಿಗೂ ಬುದ್ಧಿಮಾತು ಹೇಳಿ ಜಾಮೀನು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>