ಮುಂಗಾರು ಪೂರ್ವ ಮತ್ತು ನಂತರ ಮಳೆ ಉತ್ತಮವಾಗಿ ಬಿದ್ದ ಕಾರಣ ರೈತರು ಕರಿ ಎಳ್ಳು ಬಿತ್ತನೆ ಮಾಡಿದ್ದರು. ಬೆಳೆ ಸಮೃದ್ಧಿವಾಗಿ ಬಂದ ಕಾರಣ ಸಂತಸಪಟ್ಟಿದ್ದರು. ಆದರೆ, ಫಸಲು ಬಂದು ಕಾಳು ಕಟ್ಟುವ ಸಮಯದಲ್ಲಿ ರೋಗಕ್ಕೆ ತುತ್ತಾಗಿದೆ. ಹೊನ್ನಿಗನಹಳ್ಳಿ, ವಡ್ಡರಹಳ್ಳಿ, ಜೆ.ಬ್ಯಾಡರಹಳ್ಳಿ, ಕಾರೇಕೊಪ್ಪ, ಮಾದೇಗೌಡನದೊಡ್ಡಿ ಗ್ರಾಮಗಳಲ್ಲಿ ರೈತರು ನೂರಕ್ಕೂ ಅಧಿಕ ಎಕರೆಯಲ್ಲಿ ಕರಿಎಳ್ಳು ಬೆಳೆ ಬಿತ್ತನೆ ಮಾಡಿದ್ದರು. ಫಸಲು ಬಂದು ಕಟಾವಿನ ಹಂತ ತಲುಪಿದ್ದರೂ ಗಿಡಗಳಲ್ಲಿ ಫಸಲು ಇಲ್ಲದೆ ರೋಗಕ್ಕೆ ತುತ್ತಾಗಿ ಬರೀ ಜೊಳ್ಳು ಕಾಳುಗಳಿವೆ. ಇದರಿಂದ ಬೆಳೆ ಕಟಾವು ಮಾಡಲೂ ಹಾಗೆಯೇ ಬಿಡಲಾಗಿದೆ.